HEALTH TIPS

ಉಕ್ರೇನ್-ರಷ್ಯಾ ಸಂಘರ್ಷ: ಪ್ರಧಾನಿ ಮೋದಿ ನೇತೃತ್ವದಲ್ಲಿ ಉನ್ನತ ಮಟ್ಟದ ಸಭೆ, ಭಾರತೀಯರ ರಕ್ಷಣೆಗೆ ಮೊದಲ ಆದ್ಯತೆ

               ನವದೆಹಲಿ; ಉಕ್ರೇನ್-ರಷ್ಯಾ ಸಂಘರ್ಷ ಹಿನ್ನಲೆಯಲ್ಲಿ ಇಂದು ದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಉನ್ನತ ಮಟ್ಟದ ಸಭೆ ನಡೆದಿದೆ.


             ದೆಹಲಿ ಪ್ರಧಾನಿ ಮೋದಿ ನಿವಾಸದಲ್ಲಿ ಈ ಮಹತ್ವದ ಉನ್ನತ ಮಟ್ಟದಸಭೆ ನಡೆದಿದ್ದು, ಸಭೆಯಲ್ಲಿ ಉಕ್ರೇನ್ ನಲ್ಲಿ ಸಂಕಷ್ಟಕ್ಕೆ ಸಿಲುಕಿರುವ ಭಾರತೀಯರನ್ನು ಸುರಕ್ಷಿತವಾಗಿ ಭಾರತಕ್ಕೆ ಮರಳಿ ತರುವುದೇ ಮೊದಲ ಆದ್ಯತೆಯಾಗಿ ಪರಿಗಣಿಸಲಾಗಿದೆ. 

              

ಈ ಉನ್ನತ ಮಟ್ಟದ ಸಭೆಯಲ್ಲಿ ವಿದೇಶಾಂಗ ಸಚಿವ ಎಸ್ ಜೈಶಂಕರ್ ಸೇರಿದಂತೆ ವಿದೇಶಾಂಗ ಇಲಾಖೆಯ ಉನ್ನತ ಅಧಿಕಾರಿಗಳು ಪಾಲ್ಗೊಂಡಿದ್ದರು. ಮೋದಿ ಅವರು ಉತ್ತರ ಪ್ರದೇಶದಿಂದ ಹಿಂದಿರುಗಿದ ತಕ್ಷಣ ಸಭೆಯ ಅಧ್ಯಕ್ಷತೆ ವಹಿಸಿದ್ದರು, ಅಲ್ಲಿ ಅವರು ರಾಜ್ಯ ವಿಧಾನಸಭಾ ಚುನಾವಣೆಯ ಬಿಜೆಪಿಯ  ಪ್ರಚಾರದ ಭಾಗವಾಗಿ ರ್ಯಾಲಿಗಳಲ್ಲಿ ಪಾಲ್ಗೊಂಡಿದ್ದರು.

               ಭಾರತೀಯರ ರಕ್ಷಣೆಗೆ ಮೊದಲ ಆದ್ಯತೆ
     ಸಭೆಯಲ್ಲಿ ಭಾರತೀಯರ ರಕ್ಷಣೆಗೆ ಮೊದಲ ಆದ್ಯತೆ ನೀಡಲಾಗಿದ್ದು, ಇದಕ್ಕಾಗಿ ಉಕ್ರೇನ್ ನೆರೆ ಹೊರೆಯ ರಾಷ್ಟ್ರಗಳೊಂದಿಗೆ ರಾಜತಾಂತ್ರಿಕ ಸಭೆ ನಡೆಸಿ ಭಾರತೀಯರ ಸುರಕ್ಷಿತ ರವಾನೆಗೆ ಯೋಜನೆ ರೂಪಿಸಲಾಗುತ್ತಿದೆ. ಅಲ್ಲದೆ ಅಂತಾರಾಷ್ಟ್ರೀಯ ರೆಡ್ ಕ್ರಾಸ್ ಸಂಸ್ಥೆಯನ್ನು ಸಂಪರ್ಕಿಸಿ ಗಡಿಗಳತ್ತ  ಬರಲಾಗದ ಭಾರತೀಯರ ಹಾಲಿ ಪರಿಸ್ಥಿತಿ ಕುರಿತು ಮಾಹಿತಿ ಪಡೆಯಲು ಕೇಂದ್ರ ಸರ್ಕಾರ ನಿರ್ಧರಿಸಿದೆ. 

            ಉಕ್ರೇನ್ ಮೇಲೆ ರಷ್ಯಾದ ದಾಳಿಯ ನಂತರ ಹೆಚ್ಚಿನ ಸಂಖ್ಯೆಯ ಭಾರತೀಯರು, ಹೆಚ್ಚಾಗಿ ವಿದ್ಯಾರ್ಥಿಗಳು, ಉಕ್ರೇನ್‌ನಲ್ಲಿ ಸಿಲುಕಿಕೊಂಡಿದ್ದಾರೆ. ಭಾರತವು ಅವರನ್ನು ಸ್ಥಳಾಂತರಿಸಲು ಪ್ರಾರಂಭಿಸಿದೆ ಮತ್ತು ಶನಿವಾರದಿಂದ 2000 ಕ್ಕೂ ಹೆಚ್ಚು ಜನರನ್ನು ಮರಳಿ ಕರೆತರಲಾಗಿದೆ. ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್  ಮತ್ತು ಉಕ್ರೇನ್ ನಾಯಕ ವೊಲೊಡಿಮಿರ್ ಝೆಲೆನ್ಸ್ಕಿ ಅವರೊಂದಿಗೆ ಮಾತನಾಡಿರುವ ಮೋದಿ, ಬಿಕ್ಕಟ್ಟನ್ನು ಶಮನಗೊಳಿಸಲು ಮಾತುಕತೆಗೆ ಭಾರತ ಕರೆ ನೀಡಿದೆ. 

Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries