HEALTH TIPS

ಕೊರೋನಾ; ರಾಜ್ಯದಲ್ಲಿ ಇಂದು 1088 ಮಂದಿಗೆ ಸೋಂಕು ಪತ್ತೆ: ಒಟ್ಟು ಮೃತರ ಸಂಖ್ಯೆ 66,793 ಕ್ಕೆ ಏರಿಕೆ

                ತಿರುವನಂತಪುರ: ರಾಜ್ಯದಲ್ಲಿ ಇಂದು 1088 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಎರ್ನಾಕುಳಂ 217, ಕೊಟ್ಟಾಯಂ 145, ಕೋಝಿಕ್ಕೋಡ್ 107, ತಿರುವನಂತಪುರ 104, ತ್ರಿಶೂರ್ 82, ಕೊಲ್ಲಂ 76, ಪತ್ತನಂತಿಟ್ಟ 75, ಇಡುಕ್ಕಿ 63, ಆಲಪ್ಪುಳ 49, ಮಲಪ್ಪುರಂ 41, ಕಣ್ಣೂರು 37, ವಯನಾಡ್ 37, ಪಾಲಕ್ಕಾಡ್ 34, ಕಾಸರಗೋಡು 21 ಎಂಬಂತೆ ಸೋಂಕು ದೃಢಪಟ್ಟಿದೆ. ಕಳೆದ 24 ಗಂಟೆಗಳಲ್ಲಿ 22,050 ಮಾದರಿಗಳನ್ನು ಪರೀಕ್ಷಿಸಲಾಗಿದೆ.

          ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಪ್ರಸ್ತುತ 26,967 ಮಂದಿ ಜನರು ಕಣ್ಗಾವಲಿನಲ್ಲಿದ್ದಾರೆ. ಇವರಲ್ಲಿ 26,036 ಮಂದಿ ಮನೆ/ ಸಾಂಸ್ಥಿಕ ಕ್ವಾರಂಟೈನ್‍ನಲ್ಲಿದ್ದಾರೆ ಮತ್ತು 931 ಮಂದಿ ಆಸ್ಪತ್ರೆಯ ನಿಗಾದಲ್ಲಿದ್ದಾರೆ. 108 ಮಂದಿ ಹೊಸದಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಪ್ರಸ್ತುತ, 9530 ಕರೋನಾ ಪ್ರಕರಣಗಳಲ್ಲಿ, ಕೇವಲ 9.5 ಪ್ರತಿಶತದಷ್ಟು ಜನರು ಮಾತ್ರ ಆಸ್ಪತ್ರೆ / ಸ್ಥಳೀಯ ಆಸ್ಪತ್ರೆಗಳಿಗೆ ದಾಖಲಾಗಿದ್ದಾರೆ.

             ಕಳೆದ 24 ಗಂಟೆಗಳಲ್ಲಿ ಒಬ್ಬರು ಮಾತ್ರ ಕೋವಿಡ್ ಬಾಧಿಸಿ ಮೃತರಾಗಿದ್ದಾರೆ. ಇದಲ್ಲದೆ, ದಾಖಲೆಗಳನ್ನು ತಡವಾಗಿ ಸ್ವೀಕರಿಸಿದ ಕಾರಣ ನಾಲ್ಕು ಸಾವುಗಳು ಮತ್ತು ಸುಪ್ರೀಂ ಕೋರ್ಟ್‍ನ ಹೊಸ ಮಾರ್ಗಸೂಚಿಗಳ ಅಡಿಯಲ್ಲಿ ಕೇಂದ್ರ ಸರ್ಕಾರವು ಮೇಲ್ಮನವಿ ಸಲ್ಲಿಸಿದ್ದರಿಂದ 26 ಸಾವುಗಳು ವರದಿಯಾಗಿವೆ. ಈ ಮೂಲಕ ರಾಜ್ಯದಲ್ಲಿ ಒಟ್ಟು ಸಾವಿನ ಸಂಖ್ಯೆ 66,793ಕ್ಕೆ ಏರಿಕೆಯಾಗಿದೆ.

                 ಇಂದು ದೃಢಪಟ್ಟಿರುವ 3 ಪ್ರಕರಣಗಳು ಹೊರ ರಾಜ್ಯದಿಂದ ಬಂದವರು. 1028 ಮಂದಿ ಜನರು ಸಂಪರ್ಕದಿಂದ ಸೋಂಕಿಗೆ ಒಳಗಾಗಿದ್ದಾರೆ. 53 ಮಂದಿಯ ಸಂಪರ್ಕ ಮೂಲವು ಸ್ಪಷ್ಟವಾಗಿಲ್ಲ. ಇಂದು ನಾಲ್ವರು ಆರೋಗ್ಯ ಕಾರ್ಯಕರ್ತರಿಗೆ ಕೋವಿಡ್ ಪತ್ತೆಯಾಗಿದೆ. 

                ರೋಗನಿರ್ಣಯ ಮತ್ತು ಚಿಕಿತ್ಸೆ ಪಡೆದ 2037 ಮಂದಿ ಜನರು ಗುಣಮುಖರಾಗಿದ್ದಾರೆ. ತಿರುವನಂತಪುರ 231, ಕೊಲ್ಲಂ 179, ಪತ್ತನಂತಿಟ್ಟ 112, ಆಲಪ್ಪುಳ 107, ಕೊಟ್ಟಾಯಂ 223, ಇಡುಕ್ಕಿ 119, ಎರ್ನಾಕುಳಂ 344, ತ್ರಿಶೂರ್ 153, ಪಾಲಕ್ಕಾಡ್ 132, ಮಲಪ್ಪುರಂ 57, ಕೋಝಿಕ್ಕೋಡ್ 221, ವಯನಾಡ್ 82, ಕಣ್ಣೂರು 59, ಕಾಸರಗೋಡು 18 ಎಂಬಂತೆ ಗುಣಮುಖರಾಗಿದ್ದಾರೆ. ಇದರೊಂದಿಗೆ 9530 ಮಂದಿ ಜನರಿಗೆ ರೋಗ ಪತ್ತೆಯಾಗಿದ್ದು, ಇನ್ನೂ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದುವರೆಗೆ 64,43,070 ಮಂದಿ ಜನರು ಕೊರೊನಾದಿಂದ ಮುಕ್ತರಾಗಿದ್ದಾರೆ.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries