HEALTH TIPS

ಆಪರೇಷನ್ ಗಂಗಾ: ಉಕ್ರೇನ್ ನಿಂದ ಇಂದು 182 ಭಾರತೀಯರು ಸ್ವದೇಶಕ್ಕೆ

             ನವದೆಹಲಿ: ಆಪರೇಷನ್ ಗಂಗಾ ಭಾಗವಾಗಿ ಕಾರ್ಯಾಚರಣೆ ನಡೆಸುತ್ತಿರುವ ವಿಮಾನಗಳ ಪೈಕಿ 7 ನೇ ವಿಮಾನ ಸುರಕ್ಷಿತವಾಗಿ ಭಾರತ ತಲುಪಿದ್ದು, 182 ಭಾರತೀಯರು ತಾಯ್ನಾಡಿಗೆ ಇಂದು (ಮಾ.1) ರಂದು ಮರಳಿ ಬಂದಿದ್ದಾರೆ. 

             "ಏರ್ ಇಂಡಿಯಾ ಎಕ್ಸ್ ಪ್ರೆಸ್ ವಿಶೇಷ ವಿಮಾನ ಛತ್ರಪತಿ ಶಿವಾಜಿ ಮಹಾರಾಜ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನು ತಲುಪಿದ್ದು, ಎಂಎಸ್ಎಂಇ ಇಲಾಖೆಯ ಕೇಂದ್ರ ಸಚಿವ ನಾರಾಯಣ್ ರಾಣೆ ಭಾರತೀಯರನ್ನು ಸ್ವಾಗತಿಸಿದರು ಈ ಪೈಕಿ ಬಹುತೇಕ ಮಂದಿ ವಿದ್ಯಾರ್ಥಿಗಳಿದ್ದರು" ಎಂದು ವಿದೇಶಾಂಗ ಇಲಾಖೆ ಹೇಳಿದೆ. 

           ಉಕ್ರೇನ್ ನಿಂದ ಎಲ್ಲಾ ಭಾರತೀಯರನ್ನು ಸುರಕ್ಷಿತವಾಗಿ ವಾಪಸ್ ಕರೆತರಲು ಭಾರತ ಸರ್ಕಾರ ಬದ್ಧವಾಗಿದೆ. "ನಿಮ್ಮ ಸ್ನೇಹಿತರು ಹಾಗೂ ಸಹೋದ್ಯೋಗಿಗಳನ್ನೂ ಸುರಕ್ಷಿತವಾಗಿ ಕರೆತರುತ್ತೇವೆ ಎಂದು ಸಚಿವರು ಭಾರತಕ್ಕೆ ಮರಳಿದವರಿಗೆ ಭರವಸೆ ನೀಡಿದ್ದಾರೆ. 

              "ಮಾಧ್ಯಮಗಳೊಂದಿಗೆ ಮಾತನಾಡಿರುವ ಸಚಿವರು, ಯುದ್ಧಗ್ರಸ್ತ ದೇಶದಿಂದ ಬಂದ ವಿದ್ಯಾರ್ಥಿಗಳು ಭಯಗೊಂಡಿದ್ದಾರೆ ಅವರು ತಮ್ಮ ಮನೆಗಳಿಗೆ ತೆರಳಲು ಎಲ್ಲಾ ರೀತಿಯ ನೆರವನ್ನೂ ನೀಡಲಾಗುತ್ತದೆ" ಎಂದು ತಿಳಿಸಿದ್ದಾರೆ. 


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries