HEALTH TIPS

ಬಾಂಗ್ಲಾದೇಶದಲ್ಲಿರುವ ಇಸ್ಕಾನ್​ ರಾಧಾಕಾಂತ ದೇವಸ್ಥಾನದ ಮೇಲೆ 200ಕ್ಕೂ ಹೆಚ್ಚು ಮಂದಿಯಿಂದ ದಾಳಿ

            ಢಾಕಾ: ಬಾಂಗ್ಲಾದೇಶದ ರಾಜಧಾನಿ ಢಾಕಾದ ವಾರಿಯಲ್ಲಿರುವ 222 ಲಾಲ್​ ಮೋಹನ್​ ಸಹಾ ಸ್ಟ್ರೀಟ್​ನಲ್ಲಿರುವ ಇಸ್ಕಾನ್​ ರಾಧಾಕಾಂತ ದೇವಸ್ಥಾನದ ಮೇಲೆ ಸುಮಾರು 200 ಮಂದಿ ದಾಳಿ ಮಾಡಿ, ಹಾನಿಗೊಳಿಸಿರುವುದಲ್ಲದೆ, ದೇವಸ್ಥಾನವನ್ನು ಲೂಟಿ ಮಾಡಿರುವುದು ವರದಿಯಾಗಿದೆ.

             ಗುರುವಾರ ಈ ಘಟನೆ ನಡೆದಿದೆ. ದಾಳಿಯಲ್ಲಿ ಸುಮಂತ್ರ ಚಂದ್ರ, ಶ್ರವಣ್​, ನಿಹಾರ್​ ಹಲ್ದಾರ್​, ರಾಜೀವ್​ ಭದ್ರ ಸೇರಿದಂತೆ ಅನೇಕ ಜನರು ಗಾಯಗೊಂಡಿದ್ದಾರೆ. ಹಾಜಿ ಸಫಿಉಲ್ಲಾ ನೇತೃತ್ವದ ಗುಂಪೊಂದು ಈ ಕೃತ್ಯವನ್ನು ಎಸಗಿದ್ದಾರೆಂದು ತಿಳಿದುಬಂದಿದೆ.

              ಕಳೆದ ವರ್ಷ ಬಾಂಗ್ಲಾದೇಶದ ಕೊಮಿಲ್ಲಾ ಪಟ್ಟಣದ ನನುವಾರ್ ದಿಘಿ ಸರೋವರದ ಬಳಿಯ ದುರ್ಗಾ ಪೂಜೆ ವೇಳೆ ಕುರಾನ್ ಅನ್ನು ಅಪವಿತ್ರಗೊಳಿಸಲಾಗಿದೆ ಎಂದು ಸಾಮಾಜಿಕ ಮಾಧ್ಯಮದಲ್ಲಿ ಸುದ್ದಿ ಹರಡಿದ ಬೆನ್ನಲ್ಲೇ ಉಂಟಾದ ಹಿಂಸಾಚಾರದಲ್ಲಿ ಕನಿಷ್ಠ ಮೂವರನ್ನು ಕೊಲ್ಲಲಾಗಿತ್ತು.

ಈ ಹಿಂದೆ, ಢಾಕಾದ ಟಿಪ್ಪು ಸುಲ್ತಾನ್ ರಸ್ತೆ ಮತ್ತು ಚಿತ್ತಗಾಂಗ್‌ನ ಕೊಟ್ವಾಲಿಯಲ್ಲಿಯೂ ಇದೇ ರೀತಿಯ ಘಟನೆಗಳು ವರದಿಯಾಗಿದ್ದವು.


Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries