ತಿರುವನಂತಪುರ: ರಾಜ್ಯದಲ್ಲಿ ಇಂದು 2,222 ಮಂದಿಗೆ ಕೋವಿಡ್ ದೃಢಪಟ್ಟಿದೆ. ತಿರುವನಂತಪುರ 432, ಎರ್ನಾಕುಳಂ 354, ಕೊಟ್ಟಾಯಂ 213, ಕೊಲ್ಲಂ 197, ಕೋಝಿಕ್ಕೋಡ್ 177, ತ್ರಿಶೂರ್ 126, ಇಡುಕ್ಕಿ 118, ಆಲಪ್ಪುಳ 114, ಮಲಪ್ಪುರಂ 102, ಪತ್ತನಂತಿಟ್ಟ 100, ವಯನಾಡ್ 89, ಕಣ್ಣೂರು 85, ಕಾಸರಗೋಡು 70 ಎಂಬಂತೆ ಕೋವಿಡ್ ದೃಢೀಕರಿಸಲಾಗಿದೆ.
ಕಳೆದ 24 ಗಂಟೆಗಳಲ್ಲಿ 36,061 ಮಾದರಿಗಳನ್ನು ಪರೀಕ್ಷಿಸಲಾಗಿದೆ.
ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಪ್ರಸ್ತುತ 83,309 ಮಂದಿ ಜನರು ಕಣ್ಗಾವಲಿನಲ್ಲಿದ್ದಾರೆ. ಇವರಲ್ಲಿ 81,767 ಮಂದಿ ಮನೆ/ಸಾಂಸ್ಥಿಕ ಕ್ವಾರಂಟೈನ್ನಲ್ಲಿದ್ದಾರೆ ಮತ್ತು 1,542 ಮಂದಿ ಆಸ್ಪತ್ರೆಗಳಲ್ಲಿದ್ದಾರೆ. ಒಟ್ಟು 224 ಮಂದಿ ಹೊಸದಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಪ್ರಸ್ತುತ, 19,051 ಕೊರೋನಾ ಪ್ರಕರಣಗಳಲ್ಲಿ, ಕೇವಲ 8.4 ಶೇಕಡಾ ಜನರು ಮಾತ್ರ ಆಸ್ಪತ್ರೆಗಳು / ಸ್ಥಳೀಯ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ.
ಕಳೆದ 24 ಗಂಟೆಗಳಲ್ಲಿ ಕೋವಿಡ್ ಬಾಧಿಸಿ ಮೂವರು ಮೃತರಾಗಿದ್ದಾರೆ. ಇದಲ್ಲದೆ, ಹಿಂದಿನ ದಿನಗಳಲ್ಲಿ ದಾಖಲೆಗಳನ್ನು ತಡವಾಗಿ ಸ್ವೀಕರಿಸಿದ ಕಾರಣ 70 ಸಾವುಗಳು ಮತ್ತು ಸುಪ್ರೀಂ ಕೋರ್ಟ್ನ ಹೊಸ ಮಾರ್ಗಸೂಚಿಗಳ ಅಡಿಯಲ್ಲಿ ಕೇಂದ್ರ ಸರ್ಕಾರವು ಮೇಲ್ಮನವಿ ಸಲ್ಲಿಸಿದ್ದರಿಂದ 88 ಸಾವುಗಳು ವರದಿಯಾಗಿವೆ. ಈ ಮೂಲಕ ರಾಜ್ಯದಲ್ಲಿ ಒಟ್ಟು ಸಾವಿನ ಸಂಖ್ಯೆ 65,758ಕ್ಕೆ ಏರಿಕೆಯಾಗಿದೆ. ಇಂದು ಸೋಂಕು ಪತ್ತೆಯಾದವರಲ್ಲಿ 10 ಮಂದಿ ಹೊರ ರಾಜ್ಯದವರು. 2093 ಮಂದಿ ಜನರು ಸಂಪರ್ಕದಿಂದ ಸೋಂಕಿಗೆ ಒಳಗಾಗಿದ್ದಾರೆ. 94 ಮಂದಿಯ ಸಂಪರ್ಕ ಮೂಲ ಸ್ಪಷ್ಟವಾಗಿಲ್ಲ. ಇಂದು ಇಪ್ಪತ್ತೈದು ಮಮನದಿ ಆರೋಗ್ಯ ಕಾರ್ಯಕರ್ತರಿಗೆ ಸೋಂಕು ಪತ್ತೆಯಾಗಿದೆ.
ರೋಗನಿರ್ಣಯ ಮತ್ತು ಚಿಕಿತ್ಸೆ ಪಡೆದ 4673 ಮಂದಿ ಜನರು ಗುಣಮುಖರಾಗಿದ್ದಾರೆ. ತಿರುವನಂತಪುರ 847, ಕೊಲ್ಲಂ 121, ಪತ್ತನಂತಿಟ್ಟ 243, ಆಲಪ್ಪುಳ 240, ಕೊಟ್ಟಾಯಂ 536, ಇಡುಕ್ಕಿ 296, ಎರ್ನಾಕುಳಂ 650, ತ್ರಿಶೂರ್ 342, ಪಾಲಕ್ಕಾಡ್ 223, ಮಲಪ್ಪುರಂ 330, ಕೋಝಿಕ್ಕೋಡ್ 415, ವಯನಾಡ್ 227, ವಯನಾಡ್ 168, ಕಾಸರಗೋಡು 35 ಮಂದಿ ಎಂಬಂತೆ ಗುಣಮುಖರಾಗಿದ್ದಾರೆ.ಇದರೊಂದಿಗೆ 19,051 ಜನರಿಗೆ ರೋಗ ಪತ್ತೆಯಾಗಿದ್ದು, ಇನ್ನೂ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದುವರೆಗೆ 64,21,042 ಮಂದಿ ಕೊರೊನಾದಿಂದ ಮುಕ್ತರಾಗಿದ್ದಾರೆ.




