ಕುಂಬಳೆ: ಕೇರಳ ಸರ್ಕಾರವವು ಇತ್ತೀಚೆಗೆ ಮಂಡಿಸಿದ ರಾಜ್ಯ ಮುಂಗಡಪತ್ರದಲ್ಲಿ ಕಾಸರಗೋಡಿನ ಕನ್ನಡ ಹೋರಾಟಗಾರ, ಕವಿ ಡಾ.ಕಯ್ಯಾರ ಕಿಂಞ್ಣಣ್ಣ ರೈಗಳ ಸ್ಮಾರಕ ಭವನ ನಿರ್ಮಾಣಕ್ಕೆ 40 ಲಕ್ಷ ರೂ.ಗಳನ್ನು ಮೀಸಲಿರಿಸಿದ್ದು ಶ್ಲಾಘನೀಯವೆಂದು ಕರ್ನಾಟಕ ಜಾನಪದ ಪರಿಷತ್ತು ಕೇರಳ ಗಡಿನಾಡ ಘಟಕಾ|ಧ್ಯಕ್ಷ ಎ.ಆರ್.ಸುಬ್ಬಯ್ಯಕಟ್ಟೆ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕರ್ನಾಟಕ ಹಾಗೂ ಕೇರಳ ಸರ್ಕಾರಗಳು ಕವಿ ಕಯ್ಯಾರರ ಸ್ಮಾರಕ ನಿರ್ಮಾಣಕ್ಕೆ ಏಕಕಾಲದಲ್ಲಿ ಮುತುವರ್ಜಿ ವಹಿಸಿದ್ದು ಗಮನಾರ್ಹವಾಗಿದೆ. ಎರಡೂ ಸರ್ಕಾರಗಳು ಜಂಟಿ ಆಶ್ರಯದಲ್ಲಿ ಪರಸ್ಪರ ಮಾತುಕತೆ ನಡೆಸುವ ಮೂಲಕ ಸ್ಮಾರಕ ಭವನ ನಿರ್ಮಾಣಕ್ಕೆ ಶೀಘ್ರ ಕಾರ್ಯೋನ್ಮುಖರಾಗಬೇಕು. ಈ ನಿಟ್ಟಿನಲ್ಲಿ ಪ್ರತಿಯೊಬ್ಬರ ಸಹಕಾರ ಅಗತ್ಯ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.