HEALTH TIPS

ಗಾಂಧಿ ಕುಟುಂಬವೇ ಪಕ್ಷ ಮುನ್ನಡೆಸಿದರೆ ಕಾಂಗ್ರೆಸ್ ನೆಲಕಚ್ಚಲಿದೆ: ಹಿಮಂತ ಬಿಸ್ವ

             ಗುವಾಹಟಿ: ಗಾಂಧಿ-ನೆಹರು ಕುಟುಂಬವೇ ಪಕ್ಷವನ್ನು ಮುನ್ನಡೆಸುವುದಾದರೆ ಕಾಂಗ್ರೆಸ್ ನೆಲಕಚ್ಚಲಿದೆ ಮತ್ತು ಪಂಚಾಯಿತಿ ಚುನಾವಣೆಯಲ್ಲೂ ಕೂಡ ಕಾಣಿಸದ ಹಾಗಾಗುತ್ತದೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ ತಿಳಿಸಿದ್ದಾರೆ.

              ಪಕ್ಷದ ಚುಕ್ಕಾಣಿಯನ್ನು ಗಾಂಧಿಗಳ ಕೈಗೆ ಕೊಟ್ಟು, ಪುನರುಜ್ಜೀವನಗೊಳ್ಳಬೇಕೋ ಅಥವಾ ನೆಲಕಚ್ಚುವುದನ್ನೇ ಟ್ರೆಂಡ್ ಮಾಡಿಕೊಳ್ಳಬೇಕೋ ಎನ್ನುವುದನ್ನು ಕಾಂಗ್ರೆಸ್ ನಿರ್ಧರಿಸಬೇಕಿದೆ ಎಂದು ತಿಳಿಸಿದ್ದಾರೆ.

              2015ರಲ್ಲಿ ಶರ್ಮಾ ಅವರು ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ್ದರು.

ಚುನಾವಣೆಗಳಲ್ಲಿನ ಸತತ ಸೋಲುಗಳಿಂದ ಗಾಂಧಿ ಕುಟುಂಬದವರು ಕಾಂಗ್ರೆಸ್‌ ಅನ್ನು ಗೆಲುವಿನತ್ತ ಕೊಂಡೊಯ್ಯಲು ಸಾಧ್ಯವಿಲ್ಲ ಎಂಬುದು ಸಾಬೀತಾಗಿದೆ. ಹೀಗಾಗಿ ಗಾಂಧಿ ಕುಟುಂಬದವರೇ ಕಾಂಗ್ರೆಸ್ ಚುಕ್ಕಾಣಿ ಹಿಡಿದರೆ ಮುಂಬರುವ ದಿನಗಳಲ್ಲಿ ಪಂಚಾಯಿತಿ ಚುನಾವಣೆಗಳಲ್ಲೂ ಕೂಡ ಪಕ್ಷ ಕಣ್ಮರೆಯಾಗಲಿದೆ ಎಂದಿದ್ದಾರೆ.

               ಮೇಲೇರಬೇಕೋ ಅಥವಾ ಗಾಂಧಿ ಕುಟುಂಬದವರೊಂದಿಗೆ ನೆಲ ಕಚ್ಚಬೇಕೋ ಎಂಬುದನ್ನು ಸದ್ಯ ಕಾಂಗ್ರೆಸ್ ನಿರ್ಧರಿಸಬೇಕಿದೆ ಎಂದು ತಿಳಿಸಿದ್ದಾರೆ.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries