HEALTH TIPS

ಬೆಂಗಳೂರು-ಕೋಲ್ಕತ್ತ ವಿಮಾನದಲ್ಲಿ ಪ್ರಯಾಣಿಕ ಅಸ್ವಸ್ಥ; ಸಾವು

          ಭುವನೇಶ್ವರ: ಬೆಂಗಳೂರಿನಿಂದ ಕೋಲ್ಕತ್ತಗೆ ಹೊರಟಿದ್ದ ವಿಮಾನದಲ್ಲಿ ಮಾರ್ಗ ಮಧ್ಯದಲ್ಲಿ ಪ್ರಯಾಣಿಕರೊಬ್ಬರು ಅಸ್ವಸ್ಥರಾದ ಕಾರಣ ವಿಮಾನ ತುರ್ತು ಭೂಸ್ಪರ್ಶ ಮಾಡಿದೆ. ಪ್ರಯಾಣಿಕ ಸಾವಿಗೀಡಾಗಿರುವುದಾಗಿ ವರದಿಯಾಗಿದೆ.

           ಭಾನುವಾರ ಏರ್ ಏಷಿಯಾ ವಿಮಾನವನ್ನು ಬಿಜು ಪಟ್ನಾಯಕ್‌ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ತುರ್ತಾಗಿ ಇಳಿಸಲಾಗಿದೆ ಎಂದು ಭಾರತೀಯ ವಿಮಾನ ನಿಲ್ದಾಣಗಳ ಪ್ರಾಧಿಕಾರದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

         ವಿಮಾನ ಪ್ರಯಾಣದಲ್ಲಿ ಅಸ್ವಸ್ಥರಾದ ವ್ಯಕ್ತಿಯು ಪಶ್ಚಿಮ ಬಂಗಾಳದ ಮೇದಿನಿಪುರದವರು. ಅವರನ್ನು 28 ವರ್ಷ ವಯಸ್ಸಿನ ಹಬಿಬುರ್‌ ಖಾನ್‌ ಎಂದು ಗುರುತಿಸಲಾಗಿದೆ.

           ವಿಮಾನ ನಿಲ್ದಾಣದಿಂದ ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತು. ಆದರೆ, ಅವರು ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದರು. ಅವರ ಸಾವಿಗೆ ಕಾರಣ ಇನ್ನೂ ತಿಳಿದು ಬಂದಿಲ್ಲ.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries