ಬದಿಯಡ್ಕ: ಮೊಗೇರ ಸರ್ವಿಸ್ ಸೊಸೈಟಿಯ ಕೇರಳ ರಾಜ್ಯ ಸಮಿತಿಯ ನೇತೃತ್ವದಲ್ಲಿ ಮೇ 15ರಂದು ಉಳಿಯತ್ತಡ್ಕದಲ್ಲಿ ನಡೆಯಲಿರುವ ಮೊಗೇರ ಮಹಾಸಂಗಮ 2022 ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ ಮತ್ತು ಮಹಾಮಾನವತಾವಾದಿ ಡಾ. ಬಿ.ಆರ್. ಅಂಬೇಡ್ಕರ್ ಜಯಂತಿ ಕಾರ್ಯಕ್ರಮ ಏಪ್ರಿಲ್ 14ರಂದು ಗುರುವಾರ ಅಪರಾಹ್ನ 2 ಗಂಟೆಗೆ ಬ್ರಹ್ಮಶ್ರೀ ಮೊಗೇರ ಮಹಾಂಕಾಳಿ ದೈವಸ್ಥಾನ ಉಪ್ಪಳ ಪಚ್ಲಂಪಾರೆಯ ಸಭಾ ಭವನದಲ್ಲಿ ನಡೆಯಲಿದೆ. ಮೊಗೇರ ಸರ್ವಿಸ್ ಸೊಸೈಟಿಯ ಎಲ್ಲಾ ಸದಸ್ಯರು ಈ ಸಭೆಯಲ್ಲಿ ಪಾಲ್ಗೊಳ್ಳುವಂತೆ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

