HEALTH TIPS

ದೇಶದಲ್ಲಿ ಶೇ 31.6 ರಷ್ಟು ಮಂದಿಗೆ ಸ್ಥೂಲಕಾಯದ ಸಮಸ್ಯೆ- ಕೇಂದ್ರ ಸಚಿವ ಮನ್ಸೂಖ್ ಮಾಂಡವೀಯ

         ಬೆಂಗಳೂರು: ಆಧುನಿಕ ತಂತ್ರಜ್ಞಾನವನ್ನು ಸಮರ್ಪಕವಾಗಿ ಸದ್ಬಳಕೆ ಮಾಡಿಕೊಳ್ಳುವ ಮೂಲಕ ಆರೋಗ್ಯಕರ ಜೀವನ ಶೈಲಿಯನ್ನು ರೂಢಿಸಿಕೊಳ್ಳಲು ಜನತೆ ಮುಂದಾಗಬೇಕು ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಮನ್ಸೂಖ್ ಮಾಂಡವೀಯ ಹೇಳಿದ್ದಾರೆ.

          ಬೊಜ್ಜು, ಸ್ಥೂಲಕಾಯ ಸಮಸ್ಯೆಗಳ ಕುರಿತು ಇಂದಿನಿಂದ ನಗರದಲ್ಲಿ ಆರಂಭವಾಗಿರುವ ಮೂರು ದಿನಗಳ ಅಂತರರಾಷ್ಟ್ರೀಯ ತಜ್ಞ ವೈದ್ಯರ “ಒಸಿಕಾನ್ 2022” ಸಮ್ಮೇಳನವನ್ನು ವರ್ಚುವಲ್ ಮೂಲಕ ಉದ್ಘಾಟಿಸಿ ಮಾತನಾಡಿದ ಅವರು, ತಂತ್ರಜ್ಞಾನದಲ್ಲಿ ವ್ಯಾಪಕ ಅಭಿವೃದ್ಧಿಯಾಗುತ್ತಿದ್ದು, ದಿನನಿತ್ಯ ಬಗೆ ಬಗೆಯ ಸಂಶೋಧನೆಗಳು ನಡೆಯುತ್ತಿವೆ. ಇದರ ಜತೆ ಅನಾರೋಗ್ಯಕರ ಜೀವನ ಶೈಲಿಯೂ ಸಹ ಹೆಚ್ಚಾಗುತ್ತಿದೆ. ಹೀಗಿರುವಾಗ ತಂತ್ರಜ್ಞಾನ ಆರೋಗ್ಯಪೂರ್ಣ ಬದುಕಿಗೆ ನಾಂದಿಯಾಗಬೇಕು ಎಂದರು.


           ಕೋವಿಡ್ ಸಂದರ್ಭದಲ್ಲಿ ಸ್ಥೂಲಕಾಯದವರಿಗೆ ಹೆಚ್ಚಿನ ಸಮಸ್ಯೆಗಳು ಎದುರಾಗಿತ್ತು. ಇದನ್ನು ಅಂಕಿ ಅಂಶಗಳೇ ದೃಢಪಡಿಸುತ್ತವೆ. ಹೀಗಾಗಿಯೇ ನಾವು ಸೂಕ್ತ ಆರೋಗ್ಯ ನಿರ್ವಹಣೆ, ಜೀವನ ಪದ್ಧತಿಯಲ್ಲಿ ಬದಲಾವಣೆ ಹೊಂದಬೇಕಾಗಿದೆ. ದಿನನಿತ್ಯ ವ್ಯಾಯಾಮಕ್ಕೆ ಒತ್ತು ನೀಡಬೇಕು.ಕಳವಳಕಾರಿ ಸಂಗತಿ ಎಂದರೆ ದೇಶದಲ್ಲಿ ಶೇ 31.6 ರಷ್ಟು ಮಂದಿ ಸ್ಥೂಲಕಾಯದಿಂದ ಬಳಲುತ್ತಿದ್ದು, ಇದನ್ನು ನೋಡಿದರೆ ನಮ್ಮ ಮುಂದೆ ಇದು ಬಹುದೊಡ್ಡ ಸಮಸ್ಯೆಯಾಗಿ ನಿಂತಿದೆ. ಅಪಾಯದ ಗಂಟೆ ಭಾರಿಸುತ್ತಿದೆ ಎಂದು ಡಾ. ಮನ್ಸುಖ್ ಮಾಂಡವೀಯ ಹೇಳಿದರು.

            ತಂತ್ರಜ್ಞಾನ ನಮ್ಮ ಅಂಗೈಯಲ್ಲಿದೆ. ಪ್ರತಿದಿನ ನಾವು ಎಷ್ಟು ಕ್ಯಾಲರಿ ಬರ್ನ್ ಮಾಡಿದ್ದೇವೆ ಎನ್ನುವುದನ್ನು ನಾವೇ ನೋಡಿಕೊಳ್ಳಬಹುದು. ಎಲ್ಲರೂ ಸ್ಥೂಲಕಾಯದಿಂದ ಮುಕ್ತರಾಗಲು ಸಾಧ್ಯವಿದೆ. ಬೊಜ್ಜು, ಸ್ಥೂಲಕಾಯ ಸಮಸ್ಯೆಗಳ ಕುರಿತು ಹೆಚ್ಚು ಜನ ಜಾಗೃತಿ ಮೂಡಬೇಕು. ಜನರಲ್ಲಿ ವ್ಯಾಯಾಮ, ಯೋಗ, ಉತ್ತಮ ಆಹಾರ, ವಿಹಾರ, ವಿಚಾರಗಳ ಬಗ್ಗೆ ತಿಳಿವಳಿಕೆ ನೀಡಬೇಕು ಎಂದು ಸಚಿವ ಡಾ. ಮನ್ಸುಖ್ ಮಾಂಡವೀಯ ತಿಳಿಸಿದರು.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries