ಪಾಲಕ್ಕಾಡ್: ಪಾಲಕ್ಕಾಡ್ನಲ್ಲಿ ಆರ್ ಎಸ್ ಎಸ್ ಮುಖಂಡನೊಬ್ಬನನ್ನು ಕಡಿದು ಹತ್ಯೆ ಮಾಡಲಾಗಿದೆ. ಆರ್ಎಸ್ಎಸ್ ಮಾಜಿ ದೈಹಿಕ ಶಿಕ್ಷಕ ಶ್ರೀನಿವಾಸನ್ ಹತ್ಯೆಗೀಡಾದರು. ಪಾಲಕ್ಕಾಡ್ನ ಮೇಲಮುರಿ ಎಂಬಲ್ಲಿ ದಾಳಿ ನಡೆದಿದೆ. ಇಂದು ಮಧ್ಯಾಹ್ನ 1.15ರ ಸುಮಾರಿಗೆ ಈ ಕೃತ್ಯ ನಡೆದಿದೆ. ದಾಳಿಯಲ್ಲಿ ಶ್ರೀನಿವಾಸನ್ ತೀವ್ರವಾಗಿ ಗಾಯಗೊಂಡಿದ್ದರು. ಕೂಡಲೇ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಅಷ್ಟರಲ್ಲಾಗಲೇ ಅವರು ಮೃತಪಟ್ಟಿದ್ದರು. ತಲೆ, ಕೈಕಾಲುಗಳನ್ನು ಕತ್ತರಿಸಿರುವ ಸ್ಥಿತಿಯಲ್ಲಿ ಕಂಡುಬಂದಿದೆ.
ಮೂರು ವಾಹನಗಳಲ್ಲಿ ಬಂದವರು ದಾಳಿ ನಡೆಸಿದರೆಂದು ಪ್ರತ್ಯಕ್ಷದರ್ಶಿಯೊಬ್ಬರು ಪೋಲೀಸರಿಗೆ ತಿಳಿಸಿದ್ದಾರೆ. ಅಂಗಡಿಯೊಳಗೆ ನುಗ್ಗಿ ಕಡಿಯಲಾಗಿದೆ. ತಂಡದಲ್ಲಿ ಐವರು ಇದ್ದರು ಎಂದು ಪೋಲೀಸರಿಗೆ ತಿಳಿಸಿದ್ದಾರೆ. ಪ್ರದೇಶದ ಸಿಸಿಟಿವಿ ದೃಶ್ಯಾವಳಿಗಳನ್ನು ಸಂಗ್ರಹಿಸಲಾಗುತ್ತಿದೆ. ತೀವ್ರ ರಕ್ತಸ್ರಾವದಿಂದ ಸಾವು ಸಂಭವಿಸಿದೆ ಎಂದು ವೈದ್ಯರು ತಿಳಿಸಿದ್ದಾರೆ.