HEALTH TIPS

ಸರ್ಕಾರಿ ನೌಕರರಿಗೆ ವೇತನವಿಲ್ಲದ ದಿನಗಳು ಬರಲಿವೆಯೇ? ಕೆ-ರೈಲ್ ಪರವಾಗಿ ರಾಜ್ಯದ ಆರ್ಥಿಕ ಬಿಕ್ಕಟ್ಟಿನ ಆಳಲು ತೋಡಿದ ಹಣಕಾಸು ಸಚಿವ

                                           

                  ತಿರುವನಂತಪುರಂ: ರಾಜ್ಯ ಸರ್ಕಾರ ಅತ್ಯಂತ ಗಂಭೀರ ಆರ್ಥಿಕ ಬಿಕ್ಕಟ್ಟನ್ನು ಎದುರಿಸುತ್ತಿದೆ ಎಂದು ವಿತ್ತ ಸಚಿವ ಕೆ.ಎನ್.ಬಾಲಗೋಪಾಲ್ ಹೇಳಿದ್ದಾರೆ. ಕೇಂದ್ರ ಸರಕಾರ ಹಣ ನೀಡುತ್ತಿಲ್ಲ ಎಂಬುದು ವಿತ್ತ ಸಚಿವರು ಬಲವಾಗಿ ಆರೋಪಿಸಿದರು. ಇದೇ ಸ್ಥಿತಿ ಮುಂದುವರಿದರೆ ಮುಂದಿನ ವರ್ಷ ಸರ್ಕಾರಿ ಅಧಿಕಾರಿಗಳಿಗೆ ಸಂಬಳ ನೀಡಲು ಸಾಧ್ಯವಾಗುವುದಿಲ್ಲ ಎಂದರು.

                   ಡಿವೈಎಫ್‍ಐ ಆಯೋಜಿಸಿದ್ದ ಕೆ-ರೈಲ್ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ರಾಜ್ಯ ಸರ್ಕಾರಕ್ಕೆ ಹೆಚ್ಚಿನ ತೆರಿಗೆ ಆದಾಯವಿಲ್ಲ. ಹೀಗಾಗಿ ಕೇಂದ್ರ ಹಣ ನೀಡದಿದ್ದರೆ ಮುಂದಿನ ವರ್ಷ ವೇತನ ಹಾಗೂ ಇತರೆ ಸೌಲಭ್ಯ ನೀಡಲು ಸಾಧ್ಯವಿಲ್ಲ ಎಂದರು. ಇಂಧನ ತೆರಿಗೆ ಕಡಿಮೆ ಮಾಡುವುದಿಲ್ಲ ಎಂದು ಪುನರುಚ್ಚರಿಸಿದರು.

          ಜಗತ್ತು ಬದಲಾಗುತ್ತಿದೆ. ಅದಕ್ಕೆ ತಕ್ಕಂತೆ ರಾಜ್ಯವೂ ಬದಲಾಗಬೇಕು. ಕೇರಳದ ಯುವಕರಿಗೆ ಇಲ್ಲಿ ದುಡಿದು ಬದುಕುವ ಅವಕಾಶ ಬೇಕು. ಅಲ್ಲದೆ ಕೇರಳ ವಯೋವೃದ್ಧರಿಗೆ ವೇತನ ನೀಡುವ ದಿನವಾಗಬಾರದು ಎಂದರು. ಮೊನ್ನೆ ಕೂಡ ಆರ್ಥಿಕ ಬಿಕ್ಕಟ್ಟಿನ ಬಗ್ಗೆ ಸಚಿವರು ಮಾಹಿತಿ ನೀಡಿದ್ದರು. ಆರ್ಥಿಕ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ಸಾಲದ ಬಗ್ಗೆ ಟೀಕೆಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸಚಿವರ ಪ್ರತಿಕ್ರಿಯೆ ನೀಡಿರುವರು. 

               ಈ ನಡುವೆ ಸಾರಿಗೆ ಸಚಿವ ಆಂಟನಿ ರಾಜು ಮಾತನಾಡಿ, ಕೆಎಸ್‍ಆರ್‍ಟಿಸಿ ತೀವ್ರ ಆರ್ಥಿಕ ಮುಗ್ಗಟ್ಟು ಎದುರಿಸುತ್ತಿದೆ. ಒಂದು ಲೀಟರ್ ಇಂಧನದ ಬೆಲೆ ಡಿಸೆಂಬರ್‍ಗಿಂತ ಸುಮಾರು 38 ರೂ. ಹೆಚ್ಚಳಗೊಂಡಿದೆ. ಕೆಎಸ್‍ಆರ್‍ಟಿಸಿಗೆ ಸುಮಾರು 40 ಕೋಟಿ ರೂ. ಹೊರೆಯಾಗುತ್ತಿದೆ. ಹೀಗಾದರೆ ಖರ್ಚು ಕಡಿಮೆ ಮಾಡಿಕೊಳ್ಳುವ ಮಾರ್ಗೋಪಾಯ ಕಂಡುಕೊಳ್ಳಬೇಕು ಎಂದು ಆಂಟನಿ ರಾಜು ಹೇಳಿದರು.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries