ತಿರುವನಂತಪುರ: ಡಿ.31ರ ಮೊದಲು ಲೋಕೋಪಯೋಗಿ ಇಲಾಖೆಯ ಎಲ್ಲ ಕಚೇರಿಗಳಲ್ಲಿ ಬಯೋಮೆಟ್ರಿಕ್ ಪಂಚಿಂಗ್ ಮೂಲಕ ಹಾಜರಾತಿ ವ್ಯವಸ್ಥೆ ಜಾರಿಗೆ ತರಲು ತೀರ್ಮಾನ ಕೈಗೊಳ್ಳಲಾಗಿದೆ. ಸಚಿವ ಪಿಎ ಮೊಹಮ್ಮದ್ ರಿಯಾಜ್ ಅಧ್ಯಕ್ಷತೆಯಲ್ಲಿ ನಡೆದ ಮಿಷನ್ ತಂಡದ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.
ಎಲ್ ಡಿಎಫ್ ಸರಕಾರ ಅಧಿಕಾರಕ್ಕೆ ಬಂದ ಕೂಡಲೇ ಲೋಕೋಪಯೋಗಿ ಇಲಾಖೆ ಕಚೇರಿಗಳಲ್ಲಿ ಬಯೋಮೆಟ್ರಿಕ್ ಪಂಚಿಂಗ್ ಅಳವಡಿಸಲು ನಿರ್ಧರಿಸಲಾಗಿತ್ತು. ಇದರ ಪ್ರಗತಿ ಪರಿಶೀಲನೆ ನಡೆಸಿದ ಸಚಿವರು, ಡಿ.31ರೊಳಗೆ ಎಲ್ಲ ಕಚೇರಿಗಳಲ್ಲಿ ಪಂಚಿಂಗ್ ವ್ಯವಸ್ಥೆಯನ್ನು ಸಕ್ರಿಯಗೊಳಿಸುವಂತೆ ಸೂಚಿಸಿದರು.
ಕೊಲ್ಲಂ ಮತ್ತು ತಿರುವನಂತಪುರಂ ಜಿಲ್ಲೆಗಳ ಕಚೇರಿಗಳಲ್ಲಿ ಹಾರ್ಡ್ವೇರ್ ಅಳವಡಿಕೆ ಪೂರ್ಣಗೊಂಡಿದೆ. ಜೂನ್ 1 ರಿಂದ ಈ ಜಿಲ್ಲೆಗಳಲ್ಲಿ ಬಯೋಮೆಟ್ರಿಕ್ ಪಂಚಿಂಗ್ ಲಭ್ಯವಾಗಲಿದೆ. ರಾಜ್ಯದ ಎಲ್ಲ ಲೋಕೋಪಯೋಗಿ ಇಲಾಖೆ ಕಚೇರಿಗಳಲ್ಲಿ ಡಿಸೆಂಬರ್ 31ರೊಳಗೆ ಇದನ್ನು ಪೂರ್ಣಗೊಳಿಸುವ ಜವಾಬ್ದಾರಿಯನ್ನು ಲೋಕೋಪಯೋಗಿ ಇಲಾಖೆ ಕಾರ್ಯದರ್ಶಿ ಮತ್ತು ಜಂಟಿ ಕಾರ್ಯದರ್ಶಿ ವಹಿಸಿಕೊಂಡಿದ್ದಾರೆ.