HEALTH TIPS

ಸಿಲ್ವರ್ ಲೈನ್; ಅಸಂವಿಧಾನಿಕತೆ ಕಂಡು ಬಂದರೆ ಕ್ರಮ ಕೈಗೊಳ್ಳುವೆ: ರಾಜ್ಯಪಾಲ

                                        

             ನವದೆಹಲಿ: ಸಿಲ್ವರ್ ಲೈನ್ ಯೋಜನೆಗೆ ಸಂಬಂಧಿಸಿದಂತೆ ಸಂವಿಧಾನ ಬಾಹಿರವಾಗಿ ಏನಾದರೂ ಕಂಡುಬಂದರೆ ಕ್ರಮ ಕೈಗೊಳ್ಳುವುದಾಗಿ ಕೇರಳ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಹೇಳಿದ್ದಾರೆ. ಅವರು ದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದರು.

              ರಾಜ್ಯಪಾಲರ ನೇಮಕಕ್ಕೆ ಸಂಬಂಧಿಸಿದಂತೆ ಖಾಸಗಿ ಸದಸ್ಯರ ಮಸೂದೆ ಕುರಿತು ಪ್ರತಿಕ್ರಿಯಿಸಲು ರಾಜ್ಯಪಾಲರು ನಿರಾಕರಿಸಿದರು. ಮಸೂದೆಯನ್ನು ಮಂಡಿಸುವ ಹಕ್ಕು ಎಲ್ಲ ಸದಸ್ಯರಿಗೂ ಇದೆ ಎಂದು ಅವರು ಹೇಳಿದ್ದಾರೆ. ರಾಜ್ಯಗಳಲ್ಲಿ ರಾಜ್ಯಪಾಲರ ನೇಮಕಕ್ಕೆ ಸಂಬಂಧಿಸಿದಂತೆ ಖಾಸಗಿ ಸದಸ್ಯ ಮಸೂದೆಯನ್ನು ಸಿಪಿಎಂ ಸಂಸದರು ಮಂಡಿಸಿದ್ದಾರೆ.

               ಸಿಪಿಎಂ ರಾಜ್ಯಸಭಾ ಸಂಸದ ಶಿವದಾಸನ್ ಮಂಡಿಸಿದ ಖಾಸಗಿ ಮಸೂದೆಯಲ್ಲಿ ರಾಜ್ಯಪಾಲರನ್ನು ಪ್ರತಿ ರಾಜ್ಯದ ಶಾಸಕರು ಮತ್ತು ಸ್ಥಳೀಯ ಸಂಸ್ಥೆಗಳ ಪ್ರತಿನಿಧಿಗಳು ಆಯ್ಕೆ ಮಾಡಬೇಕು ಎಂದು ಹೇಳಲಾಗಿದೆ. ವಿಧೇಯಕವು 153, 155,156 ನೇ ವಿಧಿಗಳನ್ನು ತಿದ್ದುಪಡಿ ಮಾಡಲು ಸಹ ಪ್ರಯತ್ನಿಸುತ್ತದೆ.

                   ರಾಜ್ಯ ಸರ್ಕಾರ ಮತ್ತು ರಾಜ್ಯಪಾಲರ ನಡುವಿನ ಜಟಾಪಟಿ ನಡುವೆಯೇ ಖಾಸಗಿ ಮಸೂದೆ ಕುರಿತು ಚರ್ಚೆ ನಡೆಯುತ್ತಿದೆ. ರಾಜ್ಯಗಳ ಹಿತಾಸಕ್ತಿಗೆ ವಿರುದ್ಧವಾಗಿ ರಾಜ್ಯಪಾಲರು ನಡೆದುಕೊಂಡರೆ ಹಿಂಪಡೆಯುವ ಹಕ್ಕನ್ನೂ ಮಸೂದೆಯಲ್ಲಿ ನೀಡಲಾಗಿದೆ.

                      ರಾಜ್ಯಪಾಲರಿಗೆ ಒಂದಕ್ಕಿಂತ ಹೆಚ್ಚು ರಾಜ್ಯಗಳ ಜವಾಬ್ದಾರಿಯನ್ನು ನೀಡಬಾರದು ಮತ್ತು ಐದು ವರ್ಷಗಳಿಗಿಂತ ಹೆಚ್ಚು ಅವಧಿಯನ್ನು ನೀಡಬಾರದು ಎಂದು ಮಸೂದೆಯಲ್ಲಿ ಹೇಳಲಾಗಿದೆ.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries