HEALTH TIPS

ಜೋಸೆಫೀನ್ ಅವರ ಮೃತದೇಹ ವಿದ್ಯಾರ್ಥಿಗಳ ಅಧ್ಯಯನಕ್ಕಾಗಿ ಕಳಮಶ್ಶೇರಿ ವೈದ್ಯಕೀಯ ಕಾಲೇಜಿಗೆ ಹಸ್ತಾಂತರ

                                          

               ಕಣ್ಣೂರು: ಸಿಪಿಎಂ ಪಕ್ಷದ ಸಮ್ಮೇಳನದ ವೇಳೆ ಕುಸಿದು ಬಿದ್ದು ಬಳಿಕ  ಚಿಕಿತ್ಸೆಗೆ ಸ್ಪಂಧಿಸದೆ ನಿಧನರಾದ ಕೇಂದ್ರ ಸಮಿತಿ ಸದಸ್ಯೆ ಎಂ.ಸಿ.ಜೋಸೆಫೀನ್ ಅವರ ಪಾರ್ಥಿವ ಶರೀರವನ್ನು ವೈದ್ಯಕೀಯ ಕಾಲೇಜು ವಿದ್ಯಾರ್ಥಿಗಳ ಅಧ್ಯಯನಕ್ಕೆ ಬಿಡಲಾಗುವುದು. ಮೃತದೇಹವನ್ನು ಕಳಮಶ್ಶೇರಿ ವೈದ್ಯಕೀಯ ಕಾಲೇಜಿಗೆ ಹಸ್ತಾಂತರಿಸಲಾಗುವುದು. ಜೋಸೆಫೀನ್ ಕಣ್ಣೂರು ಎಕೆಜಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಗ ಮೃತಪಟ್ಟಿದ್ದಾರೆ.

                 ಜೋಸೆಫೀನ್ ಅವರ ಪಾರ್ಥಿವ ಶರೀರವನ್ನು ಇಂದು ರಾತ್ರಿ ಅಂಗಮಾಲಿಗೆ ಕೊಂಡೊಯ್ಯಲಾಗುವುದು. ಪಾರ್ಥಿವ ಶರೀರವನ್ನು ನಾಳೆ ಸಿಪಿಎಂ ಪ್ರದೇಶ ಸಮಿತಿ ಕಚೇರಿ ಹಾಗೂ ಸಿಎಸ್‍ಐ ಸಭಾಂಗಣದಲ್ಲಿ ಸಾರ್ವಜನಿಕ ದರ್ಶನಕ್ಕೆ ಇಡಲಾಗುವುದು. ಸಾರ್ವಜನಿಕ ದರ್ಶನದ ನಂತರ ಪಾರ್ಥಿವ ಶರೀರವನ್ನು ವೈದ್ಯಕೀಯ ಕಾಲೇಜಿಗೆ ಹಸ್ತಾಂತರಿಸಲಾಗುವುದು. ಮೃತದೇಹವನ್ನು ವೈದ್ಯಕೀಯ ಕಾಲೇಜಿಗೆ ಹಸ್ತಾಂತರಿಸಲು ಮೊದಲೇ ನಿರ್ಧರಿಸಲಾಗಿತ್ತು.

                 ಎಕೆಜಿ ಆಸ್ಪತ್ರೆಯಲ್ಲಿ ವೆಂಟಿಲೇಟರ್ ನಲ್ಲಿದ್ದ ಜೋಸೆಫೀನ್ ಮಧ್ಯಾಹ್ನ 1 ಗಂಟೆಗೆ ಮೃತಪಟ್ಟಿದ್ದಾರೆ. ಪಾರ್ಥಿವ ಶರೀರವನ್ನು ವೈಪಿನ್‍ನಲ್ಲಿರುವ ನಿವಾಸಕ್ಕೆ ರಾತ್ರಿ 11 ಗಂಟೆಗೆ ಕೊಂಡೊಯ್ಯಲಾಗುವುದು. ಎಂ ಸ್ವರಾಜ್ ನೇತೃತ್ವದ ಪಕ್ಷದ ಮುಖಂಡರು ಪಾರ್ಥಿವ ಶರೀರದೊಂದಿಗೆ ತೆರಳಲಿದ್ದಾರೆ. ಅಖಿಲ ಭಾರತ ಪ್ರಜಾಸತ್ತಾತ್ಮಕ ಮಹಿಳಾ ಸಂಘದ ಉಪಾಧ್ಯಕ್ಷೆ ಹಾಗೂ ರಾಜ್ಯಾಧ್ಯಕ್ಷೆ, ಮಹಿಳಾ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಹಾಗೂ ಬೃಹತ್ ಕೊಚ್ಚಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷೆಯಾಗಿ ಸೇವೆ ಸಲ್ಲಿಸಿದ್ದಾರೆ. 


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries