HEALTH TIPS

ಶ್ರೀನಿವಾಸನ್ ಹತ್ಯೆ ಪ್ರಕರಣ: ಕೇರಳದಲ್ಲಿ ಎದುರಾಳಿಗಳ ಪಟ್ಟಿಯನ್ನು ಸಂಗ್ರಹಿಸಿ ಹತ್ಯೆಗೈದ ಮೊದಲ ಘಟನೆ; ಆರೋಪಿಗೆ ಜಾಮೀನು ನಿರಾಕರಿಸಬೇಕು ಎಂದ ಪೋಲೀಸ್ ವರದಿ

                       ಪಾಲಕ್ಕಾಡ್: ಆರೆಸ್ಸೆಸ್ ಕಾರ್ಯಕರ್ತ  ಶ್ರೀನಿವಾಸನ್ ಹತ್ಯೆಯಲ್ಲಿ ದೊಡ್ಡ ಸಂಚು ನಡೆದಿದೆ ಎಂದು ಪೋಲೀಸರು ಹೇಳಿದ್ದಾರೆ. ಕೇರಳದಲ್ಲಿ ಎದುರಾಳಿಗಳ ಪಟ್ಟಿ ತಯಾರಿಸಿ ಹತ್ಯೆಗೈದ ಮೊದಲ ಘಟನೆ ಇದಾಗಿದೆ ಎಂದು ಪೋಲೀಸರು ನ್ಯಾಯಾಲಯಕ್ಕೆ ಮಾಹಿತಿ ನೀಡಿದ್ದಾರೆ. ಪೆÇಲೀಸರು ನ್ಯಾಯಾಲಯಕ್ಕೆ ಸಲ್ಲಿಸಿದ ವರದಿಯ ಪ್ರತಿಯನ್ನು ಮಾಧ್ಯಮಗಳಿಗೆ ನೀಡಲಾಗಿದೆ. 

                   ಹತ್ಯೆ ಮಾಡಬೇಕಾದವರ ಪಟ್ಟಿ ಸಿದ್ಧಪಡಿಸುವುದು ಸೇರಿದಂತೆ ವಿಸ್ತೃತ ತನಿಖೆ ಅಗತ್ಯವಿದ್ದು, ಆರೋಪಿಗಳಿಗೆ ಜಾಮೀನು ನಿರಾಕರಿಸಬೇಕು ಎಂದು ಪೋಲೀಸರು ಸಲ್ಲಿಸಿರುವ ವರದಿಯಲ್ಲಿ ತಿಳಿಸಲಾಗಿದೆ. ಕೊಲೆಗೈಯ್ಯಲು  ದೊಡ್ಡ ಸಂಚು ಮಾಡಲಾಗಿತ್ತು. ಮುಹಮ್ಮದ್ ಬಿಲಾಲ್ ಮತ್ತು ರಿಯಾಜುದ್ದೀನ್ ಎಂಬವರು ಸಂಚು ಮತ್ತು ಆರೋಪಿಗಳಿಗೆ ಶಸ್ತ್ರಾಸ್ತ್ರಗಳನ್ನು ಪೂರೈಸುವಲ್ಲಿ ಸಹಚರರಾಗಿದ್ದರು. ಸಹದ್ ಅವರು ಶಸ್ತ್ರಾಸ್ತ್ರಗಳನ್ನು ವಿತರಿಸಿದರು. ಮೊಹಮ್ಮದ್ ರಿಜ್ವಾನ್ ಆರೋಪಿಗಳ ಮೊಬೈಲ್ ಪೋನ್ ಗಳನ್ನು ಸಂಗ್ರಹಿಸಿ ಸಾಕ್ಷ್ಯ ನಾಶಪಡಿಸಿದ್ದಾನೆ ಎಂದು ಪೋಲೀಸರು ನ್ಯಾಯಾಲಯದಲ್ಲಿ ವಾದ ಮಂಡಿಸಿರುವರು.  ಆರೋಪಿಗಳಿಗೆ ಜಾಮೀನು ನೀಡಿದರೆ, ತಲೆಮರೆಸಿಕೊಂಡಿರುವ ಆರೋಪಿಗಳಿಗೆ ಮತ್ತು ಸಾಕ್ಷ್ಯ ನಾಶಪಡಿಸಲು ಸಹಾಯವಾಗುತ್ತದೆ ಎಂದು ಪೋಲೀಸರು ನ್ಯಾಯಾಲಯಕ್ಕೆ ತಿಳಿಸಿದರು.

                  ಪಾಪ್ಯುಲರ್ ಫ್ರಂಟ್ ಕಾರ್ಯಕರ್ತರು ಶ್ರೀನಿವಾಸನ್ ಹತ್ಯೆಗೆ ಸಂಚು ರೂಪಿಸಿದ್ದರು ಎಂಬುದಕ್ಕೆ ಪುರಾವೆಗಳಿವೆ. ಆರೋಪಿಗಳಿಗೆ ಮಸೀದಿಗಳು ಆಶ್ರಯ ನೀಡುತ್ತವೆ ಎಂದು ಆರೋಪಿಸಲಾಗಿದೆ. ಹತ್ಯೆಗೆ ಬಳಸಿದ್ದ ಆಯುಧ ಸಾಗಿಸುತ್ತಿದ್ದ ಆಟೋ, ಆರೋಪಿಯ ಮೊಬೈಲ್ ಪೋನ್ ಹಾಗೂ ವಾಹನಗಳನ್ನು ಶನಿವಾರ ಮಸೀದಿಯ ಸುತ್ತಮುತ್ತ ವಶಪಡಿಸಿಕೊಳ್ಳಲಾಗಿದೆ. ಇದಲ್ಲದೇ ಆರೋಪಿಗಳಿಗೂ ಇಲ್ಲಿ ಆಶ್ರಯ ನೀಡಲಾಗಿತ್ತು.


Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries