ಮಧೂರು: ಮಧೂರು ಶ್ರೀ ಮದನಂತೇಶ್ವರ ಸಿದ್ಧಿವಿನಾಯಕ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರಾಮಹೋತ್ಸವಕ್ಕಾಗಿ ಗುರುವಾರ ಧ್ವಜಾರೋಹಣ ನಡೆಯಿತು. ಬೆಳಗ್ಗೆ ವೇದಪಾರಾಯಣ, ಧ್ವಜಾರೋಹಣ, ಸಹಸ್ರ ಕುಂಭಾಭಿಷೇಕ, ತುಲಾಭಾರ ಸೇವೆ, ಶ್ರೀದೇವರ ಬಲಿ ಉತ್ಸವ ನಡೆಯಿತು.
ಇಂದು ವಿಷು ಮಹೋತ್ಸವದ ಅಂಗವಾಗಿ ಬೆಳಗ್ಗೆ 5ಕ್ಕೆ ದೀಪೋತ್ಸವ, ವಿಷುಕಣಿಯ ವಿಶೇಷ ಬಲಿ. ರಾಜಾಂಗಣ ಪ್ರಸಾದ ನಡೆಯುವುದು. 16ರಂದು ನಡುದೀಪೋತ್ಸವ, 17ರಂದು ಸಂಜೆ 6.30ಕ್ಕೆ ಮೂಲಸ್ಥಾನ ಉಳಿಯತ್ತಡ್ಕಕ್ಕೆ ಘೋಷಯಾತ್ರೆ, ಮೂಲಸ್ಥಾನದಲ್ಲಿ ಕಟ್ಟೆಪೂಜೆ, ರಾತ್ರಿ 10ಕ್ಕೆ ಮಧೂರು ಬೆಡಿಕಟ್ಟೆಯಲ್ಲಿ ಸುಡುಮದ್ದು ಪ್ರದರ್ಶನ ನಡೆಯುವುದು. 18ರಂದು ಬೆಳಗ್ಗೆ 7.30ಕ್ಕೆ ಕವಾಟೋದ್ಘಾಟನೆ, ಸಂಜೆ 6ಕ್ಕೆ ತಾಯಂಬಕ, ದೀಪಾರಾಧನೆ, ಉತ್ಸವ ಬಲಿ, ದೇವಾಲಯದ ಕೆರೆಯಲ್ಲಿ ಶ್ರೀದೇವರ ಅವಭೃತಸ್ನಾನ, ಬಟ್ಟಲುಕಾಣಿಕೆ, ರಾಜಾಂಗಣ ಪ್ರಸಾದ, ಧ್ವಜಾವರೋಹಣ ನಡೆಯುವುದು.

