HEALTH TIPS

ಮಧ್ಯಪ್ರದೇಶದಲ್ಲಿ ಹನುಮ ದೇವರ ಬಗ್ಗೆ ವಿವಾದ: ಕಲ್ಲುತೂರಾಟ- ನಿಷೇಧಾಜ್ಞೆ ಜಾರಿ

            ನೀಮಚ್‌ : ಇಲ್ಲಿನ ದರ್ಗಾವೊಂದರ ಬಳಿ ಹನುಮ ದೇವರ ವಿಗ್ರಹ ಪ್ರತಿಷ್ಠಾಪನೆ ವಿಚಾರವಾಗಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಉದ್ವಿಗ್ನ ಪರಿಸ್ಥಿತಿ ಉಂಟಾಗಿದ್ದರಿಂದ ಮಧ್ಯಪ್ರದೇಶದ ನೀಮಚ್ ನಗರ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

           ವಿಗ್ರಹ ಪ್ರತಿಷ್ಠಾಪನೆ ಬಗ್ಗೆ ಎರಡು ಗುಂಪುಗಳ ನಡುವೆ ಸೋಮವಾರ ರಾತ್ರಿ ಮಾತಿನ ಚಕಮಕಿ ನಡೆಯಿತು. ನಂತರ ಪರಸ್ಪರ ಕಲ್ಲು ತೂರಾಟ ನಡೆಯಿತು. ಜನರನ್ನು ಚದುರಿಸಲು ಪೊಲೀಸರು ಅಶ್ರುವಾಯು ಶೆಲ್‌ಗಳನ್ನು ಪ್ರಯೋಗಿಸಿದರು ಎಂದು ಅವರು ಹೇಳಿದ್ದಾರೆ.

            ಹೆಚ್ಚುವರಿ ಜಿಲ್ಲಾ ಮ್ಯಾಜಿಸ್ಟ್ರೇಟ್ ನೇಹಾ ಮೀನಾ ಅವರು ನೀಮಚ್ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸೆಕ್ಷನ್ 144 ಕಲಂ ಅನ್ವಯ ನಿಷೇಧಾಜ್ಞೆ ಜಾರಿಗೊಳಿಸಿ ಆದೇಶ ಹೊರಡಿಸಿದ್ದಾರೆ.

'ಘಟನೆಗೆ ಸಂಬಂಧಿಸಿದ ನಾಲ್ಕು ಪ್ರಕರಣಗಳನ್ನು ದಾಖಲಿಸಲಾಗಿದೆ. ಕಲ್ಲು ತೂರಾಟದ ಸಂದರ್ಭದಲ್ಲಿ ಪೊಲೀಸ್‌ ಅಧಿಕಾರಿಯೊಬ್ಬರಿಗೆ ಗಾಯಗಳಾಗಿವೆ. ಸ್ತಳದಲ್ಲಿ ಬಿಗಿ ಬಂದೋಬಸ್ತ್‌ ಮಾಡಲಾಗಿದ್ದು, ಪರಿಸ್ಥಿತಿ ನಿಯಂತ್ರಣದಲ್ಲಿದೆ' ಎಂದು ಪೊಲೀಸ್ ವರಿಷ್ಠಾಧಿಕಾರಿ ಸೂರಜ್ ಕುಮಾರ್ ವರ್ಮಾ ಸುದ್ದಿಗಾರರಿಗೆ ತಿಳಿಸಿದರು.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries