HEALTH TIPS

ಸರ್ಕಾರದ ಪ್ರಥಮ ವಾರ್ಷಿಕೋತ್ಸವ: ಕಾಞಂಗಾಡ್ ಅಲಾಮಿಪಲ್ಲಿಯಲ್ಲಿ ಕಾರ್ಯಕ್ರಮ

            ಕಾಸರಗೋಡು: ಎರಡನೇ ಪಿಣರಾಯಿ ವಿಜಯನ್ ಸರ್ಕಾರದ ಪ್ರಥಮ ವಾರ್ಷಿಕೋತ್ಸವದ ಅಂಗವಾಗಿ ನನ್ನ ಕೇರಳ ವಸ್ತುಪ್ರದರ್ಶನ ಮತ್ತು ಮಾರುಕಟ್ಟೆ ಮೇಳವನ್ನು ಕಾಞಂಗಾಡ್ ಅಲಾಮಿಪಲ್ಲಿಯಲ್ಲಿ ಮೇ 3ರಿಂದ 9ರವರೆಗೆ ಹಮ್ಮಿಕೊಳ್ಳಲಾಗಿದೆ ಎಂದು ಶಾಸಕ ಇ ಚಂದ್ರಶೇಖರನ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.

             ಮೇ 4 ರಂದು ಸಂಜೆ 5 ಗಂಟೆಗೆ ಮೇಳದ ಔಪಚಾರಿಕ ಉದ್ಘಾಟನೆಯನ್ನು ಬಂದರು, ವಸ್ತುಸಂಗ್ರಹಾಲಯ, ಪುರಾತತ್ವ ಖಾತೆ  ಸಚಿವರಾದ ಅಹಮದ್ ದೇವರಕೋವಿಲ್ ನೆರವೇರಿಸುವರು. ನಾವೂ ಕೃಷಿಯೆಡೆಗೆ ಕಾರ್ಯಕ್ರಮದನ್ವಯ ನಡೆಯಲಿರುವ ಜಿಲ್ಲಾ ಮಟ್ಟದ ಉದ್ಘಾಟನಾ ಸಮಾರಂಭದಲ್ಲಿ ಸಚಿವರು ತರಕಾರಿ ಸಸಿಗಳನ್ನು ವಿತರಿಸುವರು. ಶಾಸಕ ಇ ಚಂದ್ರಶೇಖರನ್ ಅಧ್ಯಕ್ಷತೆ ವಹಿಸುವರು.  ಸಂಸದ, ಜಿಲ್ಲೆಯ ಶಾಸಕರು, ಸ್ಥಳೀಯಾಡಳಿತ ಪ್ರತಿನಿಧಿಗಳು, ರಾಜಕೀಯ ಪಕ್ಷಗಳ ಪ್ರತಿನಿಧಿಗಳು, ಜಿಲ್ಲಾಧಿಕಾರಿ. ಜಿಲ್ಲಾ ಮಟ್ಟದ ಅಧಿಕಾರಿಗಳು ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದರು.




Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries