HEALTH TIPS

ಕುತುಬ್ ಮಿನಾರ್ ಉತ್ಖನನದ ಬಗ್ಗೆ ಯಾವುದೇ ನಿರ್ಧಾರ ಕೈಗೊಂಡಿಲ್ಲ: ಕೇಂದ್ರ ಸಚಿವ

             ನವದೆಹಲಿ: ಕುತುಬ್ ಮಿನಾರ್ ಸಂಕೀರ್ಣದ ಉತ್ಖನನ ಮಾಡುವ ಬಗ್ಗೆ ಯಾವುದೇ ನಿರ್ಧಾರ ಕೈಗೊಂಡಿಲ್ಲವೆಂದು ಕೇಂದ್ರ ಸಂಸ್ಕೃತಿ ಸಚಿವ ಜಿ.ಕೆ.ರೆಡ್ಡಿ ಭಾನುವಾರ ಹೇಳಿದ್ದಾರೆ.

            ದೆಹಲಿಯ ಕುತುಬ್ ಮಿನಾರ್ ಸಂಕೀರ್ಣದಲ್ಲಿ ಉತ್ಖನನ ನಡೆಸುವಂತೆ ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಗೆ (ಎಎಸ್‌ಐ) ಕೇಂದ್ರ ಸಂಸ್ಕೃತಿ ಸಚಿವಾಲಯ ಆದೇಶಿಸಿದೆ ಎಂದು ಮಾಧ್ಯಮಗಳಲ್ಲಿ ವರದಿಗಳು ಪ್ರಕಟಗೊಂಡಿದ್ದವು.

              ಈ ಕುರಿತು ಪ್ರತಿಕ್ರಿಯಿಸಿರುವ ಜಿ.ಕೆ.ರೆಡ್ಡಿ, 'ದೆಹಲಿಯ ಕುತುಬ್ ಮಿನಾರ್ ಸಂಕೀರ್ಣದಲ್ಲಿ ಉತ್ಖನನ ಮಾಡುವ ಬಗ್ಗೆ ಯಾವುದೇ ನಿರ್ಧಾರ ಕೈಗೊಂಡಿಲ್ಲ' ಎಂದು ತಿಳಿಸಿದ್ದಾರೆ.

             ಖುತುಬ್‌ ಮಿನಾರ್‌ ಹೆಸರನ್ನು ಬದಲಿಸಿ, ಇದಕ್ಕೆ ವಿಷ್ಣು ಸ್ತಂಭವೆಂದು ಕರೆಯಬೇಕು ಎಂದು ಹಿಂದೂ ಸಂಘಟನೆಗಳು ಒತ್ತಾಯಿಸಿವೆ.

              ಮಿನಾರ್‌ ಆವರಣದಲ್ಲಿ ವಿವಿಧೆಡೆ ಇರುವ ದೇವತೆಗಳ ಮೂರ್ತಿಗಳನ್ನು ಒಂದೆಡೆ ಇರಿಸಿ ಪೂಜೆ ಸಲ್ಲಿಸಲು ಅವಕಾಶ ನೀಡಬೇಕೆಂದೂ ಆಗ್ರಹಿಸಿವೆ.

           'ಈಗ ಖುತುಬ್‌ ಮಿನಾರ್‌ ಎಂದು ಕರೆಯುತ್ತಿರುವ ವಿಷ್ಣು ಸ್ತಂಭವನ್ನು ರಾಜ ವಿಕ್ರಮಾದಿತ್ಯ ನಿರ್ಮಿಸಿದ್ದರು. ಆದರೆ, ಇದನ್ನು ತಾನೇ ನಿರ್ಮಿಸಿದ್ದಾಗಿ ಕುತುಬುದ್ದೀನ್‌ ಐಬಕ್‌ ಘೋಷಿಸಿಕೊಂಡ. ಮಿನಾರ್‌ ಆವರಣದಲ್ಲಿ 27 ದೇವಸ್ಥಾನಗಳಿದ್ದವು. ಅವು ಐಬಾಕ್‌ ದಾಳಿಯಿಂದ ನಾಶಗೊಂಡವು. ಮಿನಾರ್‌ ಆವರಣದಲ್ಲಿ ಇಂದಿಗೂ ಹಿಂದೂ ದೇವತೆಗಳ ಮೂರ್ತಿಗಳನ್ನು ಕಾಣಬಹುದು. ಹೀಗಾಗಿ ಖುತುಬ್‌ ಮಿನಾರ್‌ ಅನ್ನು ವಿಷ್ಣು ಸ್ತಂಭವೆಂದು ಘೋಷಣೆ ಮಾಡಬೇಕೆಂಬುದು ನಮ್ಮ ಆಗ್ರಹ' ಎಂದು ಯುನೈಟೆಡ್‌ ಹಿಂದೂ ಫ್ರಂಟ್‌ನ ಅಂತರರಾಷ್ಟ್ರೀಯ ಕಾರ್ಯನಿರ್ವಾಹಕ ಅಧ್ಯಕ್ಷ ಭಗವಾನ್‌ ಗೋಯಲ್‌ ಹೇಳಿದ್ದಾರೆ.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries