HEALTH TIPS

ಒಂದೇ ದಿನ 10 ಕೋಟಿ ರೂ. ದೇಣಿಗೆ ದಾಖಲಿಸಿದ್ದ ತಿಮ್ಮಪ್ಪನ ಬಳಿ ಮತ್ತೆ ಬಂತು 2.45 ಕೋಟಿ ರೂ. ಆಭರಣ!

 ತಿರುಪತಿ: ನಾಲ್ಕು ದಿನಗಳ ಹಿಂದಷ್ಟೇ ತಿರುಪತಿ ತಿಮ್ಮಪ್ಪನ ದೇವಾಲಯ ಒಂದೇ ದಿನ 10 ಕೋಟಿ ರೂಪಾಯಿ ದೇಣಿಗೆ ಸಂಗ್ರಹಿಸಿ ದಾಖಲೆ ಬರೆದಿತ್ತು.

ಹಲವು ಟ್ರಸ್ಟ್​​ಗಳಿಂದ ತಿಮ್ಮಪ್ಪನಿಗೆ ಕಾಣಿಕೆಯಾಗಿ ಒಂದೇ ದಿನದಲ್ಲಿ 10 ಕೋಟಿ ರೂ.

ಸಂಗ್ರಹವಾಗಿದೆ ಎಂದು ತಿರುಪತಿ ತಿರುಮಲ ದೇವಸ್ಥಾನ ಸಮಿತಿ ಮಾಹಿತಿ ನೀಡಿತ್ತು. ಈ ಪೈಕಿ ತಮಿಳುನಾಡಿನ ತಿರುನಲ್ವೇಲಿಯ ಉದ್ಯಮಿ ಹಾಗೂ ತಿಮ್ಮಪ್ಪನ ಭಕ್ತ ಗೋಪಾಲ ಬಾಲಕೃಷ್ಣನ್ ಎಂಬುವವರಿಂದಲೇ 7 ಕೋಟಿ ರೂ. ಕಾಣಿಕೆ ನೀಡಿದ್ದು, ಇನ್ನುಳಿದ ಶ್ರೀ ವೆಂಕಟೇಶ್ವರ ವಿದ್ಯಾದಾನ ಟ್ರಸ್ಟ್​ ಸೇರಿದಂತೆ ಇತರೆ ಎರಡು ಟ್ರಸ್ಟ್​ಗಳು ತಲಾ 1 ಕೋಟಿ ರೂ. ಕಾಣಿಕೆ ನೀಡಿವೆ. ಹಾಗಾಗಿ ದಿನದಲ್ಲೇ 10 ಕೋಟಿ ರೂ. ಸಂಗ್ರಹವಾಗಿದೆ. ಈ ಅಷ್ಟೂ ಹಣವನ್ನು ಡಿಡಿ ಮೂಲಕ ಭಕ್ತರು ನೀಡಿದ್ದರು.

ಇದಾದ ನಾಲ್ಕೇ ದಿನಗಳಲ್ಲಿ ಒಬ್ಬಳೇ ಭಕ್ತಳಿಂದ ತಿಮ್ಮಪ್ಪನಿಗೆ 2.45 ಕೋಟಿ ರೂಪಾಯಿ ದೇಣಿಗೆ ಬಂದಿದೆ. ಚೆನ್ನೈನ ವೃದ್ಧೆ ಭಕ್ತೆ ಸರೋಜಾ ಸೂರ್ಯ ನಾರಾಯಣನ್​ ಈ ದೇಣಿಗೆ ನೀಡಿದ್ದಾರೆ.

ಚಿನ್ನದ ಕಾಸುಲಾ ಹಾರ ಮತ್ತು ಯಜ್ಞೋಪವೀತವನ್ನು ಕಾಣಿಕೆಯಾಗಿ ಭಕ್ತೆ ಸರೋಜಾ ಅವರು ನೀಡಿದ್ದಾರೆ. ಇವರು ನೀಡಿರುವ ರತ್ನ ಖಚಿತ ಆಭರಣಗಳು 4.150 ಕೆಜಿ ತೂಕದ್ದಾಗಿದ್ದು, ಇದರ ಮೌಲ್ಯ 2.45 ಕೋಟಿ ರೂಪಾಯಿ ಎಂದು ತಿಳಿದುಬಂದಿದೆ.


Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries