HEALTH TIPS

ಕಂದಕಕ್ಕೆ ಉರುಳಿತು 28 ಯಾತ್ರಿಗಳಿದ್ದ ಬಸ್​; 22 ಮಂದಿ ಸಾವು

 ಉತ್ತರಾಖಂಡ: 28 ಯಾತ್ರಾರ್ಥಿಗಳು ಪ್ರಯಾಣಿಸುತ್ತಿದ್ದ ಬಸ್ಸೊಂದು ಕಂದಕಕ್ಕೆ ಉರುಳಿ ಸುಮಾರು 22 ಮಂದಿ ಸಾವಿಗೀಡಾಗಿರುವಂಥ ದುರಂತವೊಂದು ಸಂಭವಿಸಿದೆ. ಉತ್ತರಾಖಂಡದ ಯಮುನೋತ್ರಿ ರಾಷ್ಟ್ರೀಯ ಹೆದ್ದಾರಿಯ ದಮ್ಟಾ ಎಂಬಲ್ಲಿ ಈ ಅಪಘಾತ ಸಂಭವಿಸಿದೆ.

ಬಸ್​ನಲ್ಲಿ ಮಧ್ಯಪ್ರದೇಶದ ಭಕ್ತರಿದ್ದು, ಚಾರ್​​ಧಾಮಾ ಯಾತ್ರೆಗೆ ಹೊರಟಿದ್ದರು. ಪೊಲೀಸ್ ಹಾಗೂ ಎಸ್​ಡಿಆರ್​ಎಫ್​ ತಂಡಗಳು ಧಾವಿಸಿದ್ದು, ರಕ್ಷಣಾ ಕಾರ್ಯಾಚರಣೆ ಜಾರಿಯಲ್ಲಿದೆ.

ಉತ್ತರಕಾಶಿಯ ಪುರೋಲದ ದಮ್ಟಾ ಎಂಬಲ್ಲಿ ಅಪಘಾತ ಸಂಭವಿಸಿದ ಹಲವಾರು ಮಂದಿ ಸಾವಿಗೀಡಾಗಿರುವುದು ದುರದೃಷ್ಟಕರ. ಈ ಬಗ್ಗೆ ತನಿಖೆಗೆ ಆದೇಶಿಸಲಾಗಿದೆ. ಅಲ್ಲದೆ ಮಾಹಿತಿ ಸಿಕ್ಕ ತಕ್ಷಣ ರಕ್ಷಣಾ ಕಾರ್ಯಾಚರಣೆಗೆ ಆದೇಶ ನೀಡಲಾಗಿದ್ದು, ರಕ್ಷಣಾ ಸಿಬ್ಬಂದಿ ಕಾರ್ಯನಿರತರಾಗಿದ್ದಾರೆ ಎಂದು ಉತ್ತರಾಖಂಡದ ಮುಖ್ಯಮಂತ್ರಿ ಪುಷ್ಕರ್ ಧಾಮಿ ಹೇಳಿದ್ದಾರೆ.

ಮೃತಪಟ್ಟವರ ಕುಟುಂಬಕ್ಕೆ ತಲಾ 2 ಲಕ್ಷ ರೂ. ಪರಿಹಾರವನ್ನು ಪ್ರಧಾನಿ ನರೇಂದ್ರ ಮೋದಿ ಘೋಷಿಸಿದ್ದಾರೆ. ಹಾಗೇ ಗಾಯಗೊಂಡವರಿಗೆ ತಲಾ 50 ಸಾವಿರ ರೂ. ಪರಿಹಾರ ಘೋಷಣೆ ಮಾಡಿದ್ದಾರೆ.


Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries