HEALTH TIPS

ರಾಜ್ಯಸಭೆ: ಹೊಸದಾಗಿ ಆಯ್ಕೆಯಾದ ಶೇ 40ರಷ್ಟು ಸದಸ್ಯರ ವಿರುದ್ಧ ಕ್ರಿಮಿನಲ್‌ ಪ್ರಕರಣ

 ನವದೆಹಲಿರಾಜ್ಯಸಭೆಗೆ ಹೊಸದಾಗಿ ಆಯ್ಕೆಯಾಗಿರುವ 57 ಸದಸ್ಯರ ಪೈಕಿ 23 ಮಂದಿ ಮೇಲೆ (ಶೇ 40ರಷ್ಟು ಸದಸ್ಯರು) ಕ್ರಿಮಿನಲ್‌ ಪ್ರಕರಣಗಳಿವೆ. ಇವರಲ್ಲಿ ಬಿಜೆಪಿಯ ಒಂಬತ್ತು, ಕಾಂಗ್ರೆಸ್‌ನ ನಾಲ್ವರು ಸದಸ್ಯರು ಇದ್ದಾರೆ.

ಅಭ್ಯರ್ಥಿಗಳು ಸಲ್ಲಿಸಿದ್ದ ಪ್ರಮಾಣಪತ್ರಗಳನ್ನು ಆಧರಿಸಿ ಪ್ರಜಾಪ್ರಭುತ್ವ ಸುಧಾರಣಾ ಸಂಸ್ಥೆ (ಎಡಿಆರ್) ಈ ಬಗ್ಗೆ ವರದಿ ನೀಡಿದೆ.

ಈ ಸದಸ್ಯರು ತಮ್ಮ ವಿರುದ್ಧ ಕ್ರಿಮಿನಲ್ ಮೊಕದ್ದಮೆ ಇರುವುದನ್ನು ಘೋಷಿಸಿಕೊಂಡಿದ್ದಾರೆ ಎಂದು ವರದಿ ತಿಳಿಸಿದೆ.

ಕ್ರಿಮಿನಲ್‌ ಪ್ರಕರಣಗಳಿರುವ 23 ಸದಸ್ಯರಲ್ಲಿ ಉತ್ತರಪ್ರದೇಶದಿಂದ ಆರು ಮಂದಿ ಆಯ್ಕೆಯಾಗಿದ್ದಾರೆ. ಉಳಿದಂತೆ ಮಹಾರಾಷ್ಟ್ರ, ಬಿಹಾರದಿಂದ ಆಯ್ಕೆಯಾಗಿರುವ ತಲಾ ನಾಲ್ವರು, ತಮಿಳುನಾಡಿನ ಮೂವರು, ತೆಲಂಗಾಣದ ಇಬ್ಬರು, ಆಂಧ್ರಪ್ರದೇಶ, ಛತ್ತೀಸಗಡ, ರಾಜಸ್ಥಾನ, ಹರಿಯಾಣದ ತಲಾ ಒಬ್ಬರು ಸದಸ್ಯರು ಇದ್ದಾರೆ.

ಟಿಆರ್‌ಎಸ್‌ನ ಇಬ್ಬರು, ಆರ್‌ಜೆಡಿಯ ಇಬ್ಬರು, ವೈಎಸ್‌ಆರ್‌ಸಿಪಿ, ಡಿಎಂಕೆ, ಎಐಎಡಿಎಂಕೆ, ಎಸ್‌ಪಿ, ಶಿವಸೇನೆಯ ತಲಾ ಒಬ್ಬರು, ಒಬ್ಬ ಪಕ್ಷೇತರ ಅಭ್ಯರ್ಥಿ ತಮ್ಮ ವಿರುದ್ಧ ಕ್ರಿಮಿನಲ್‌ ಮೊಕದ್ದಮೆ ಇರುವುದನ್ನು ಘೋಷಿಸಿಕೊಂಡಿದ್ದಾರೆ. ಒಟ್ಟಾರೆ 12 ಮಂದಿ ಸದಸ್ಯರು ತಮ್ಮ ವಿರುದ್ಧ ಗಂಭೀರ ಸ್ವರೂಪದ ಪ್ರಕರಣಗಳಿವೆ ಎಂದು ತಿಳಿಸಿದ್ದಾರೆ.

ಕೋಟ್ಯಧಿಪತಿಗಳು: ಹೊಸದಾಗಿ ಆಯ್ಕೆಯಾದ 57 ಸದಸ್ಯರಲ್ಲಿ 53 ಮಂದಿ ಕೋಟ್ಯಧಿಪತಿಗಳು. ಇವರಲ್ಲಿ ಟಿಎಸ್‌ಆರ್‌ ಪಕ್ಷದ ಬಂಡಿ ಪಾರ್ಥ ಅವರು ಸಿರಿವಂತರಾಗಿದ್ದು, ತಮ್ಮ ಒಟ್ಟು ಆಸ್ತಿಯ ಮೌಲ್ಯ ₹ 1,500 ಕೋಟಿ ಎಂದು ಘೋಷಿಸಿಕೊಂಡಿದ್ದಾರೆ.


Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries