HEALTH TIPS

ಬಿಜೆಪಿ ರಾಜ್ಯ ಕಚೇರಿ ಮೇಲೆ ದಾಳಿ ಪ್ರಕರಣ; ದೂರು ಹಿಂಪಡೆಯುವಂತೆ ಒತ್ತಾಯಿಸಿ ಸರ್ಕಾರ ಸಲ್ಲಿಸಿದ್ದ ಅರ್ಜಿಯನ್ನು ತಿರಸ್ಕರಿಸಿದ ನ್ಯಾಯಾಲಯ

              ತಿರುವನಂತಪುರ; ಬಿಜೆಪಿ ರಾಜ್ಯ ಕಚೇರಿ ಮೇಲಿನ ದಾಳಿ ಪ್ರಕರಣವನ್ನು ಹಿಂಪಡೆಯುವಂತೆ ರಾಜ್ಯ ಸರ್ಕಾರ ಸಲ್ಲಿಸಿದ್ದ ಮನವಿಯನ್ನು ತಿರಸ್ಕರಿಸಲಾಗಿದೆ.  ತಿರುವನಂತಪುರಂ ಮುಖ್ಯ ಜ್ಯುಡಿಷಿಯಲ್ ಮ್ಯಾಜಿಸ್ಟ್ರೇಟ್ ನ್ಯಾಯಾಲಯವು ಪ್ರಕರಣವು ರಾಜಕೀಯವಾಗಿದೆ ಎಂಬ ಸರ್ಕಾರದ ವಾದವನ್ನು ಒಪ್ಪಿಕೊಳ್ಳಲಿಲ್ಲ. ಬಿಜೆಪಿ ರಾಜ್ಯಾಧ್ಯಕ್ಷ ಕೆ.ಸುರೇಂದ್ರನ್ ಮಾತನಾಡಿ, ಅರ್ಜಿಯನ್ನು ನ್ಯಾಯಾಲಯ ತಿರಸ್ಕರಿಸಿರುವುದು ಎಡ ಸರಕಾರ ಮತ್ತು ಸಿಪಿಎಂಗೆ ಭಾರೀ ಹೊಡೆತವಾಗಿದೆ ಎಂದಿರುವರು.

                   2017ರ ಜುಲೈ 28ರಂದು ಬಿಜೆಪಿ ಕಚೇರಿ ಮೇಲೆ ದಾಳಿ ನಡೆಸಲಾಗಿತ್ತು. ಸಿಸಿಟಿಟಿ ದೃಶ್ಯಾವಳಿ ಸೇರಿದಂತೆ ಖಚಿತ ಸಾಕ್ಷ್ಯಾಧಾರಗಳನ್ನು ಹೊಂದಿರುವ ಪ್ರಕರಣವನ್ನು ರದ್ದುಗೊಳಿಸಲು ಸರ್ಕಾರ ಪ್ರಯತ್ನಿಸಿದೆ. ರಾಜ್ಯ ಕಚೇರಿ ಮೇಲೆ ದಾಳಿ ನಡೆಸಿ ಅಂದಿನ ರಾಜ್ಯಾಧ್ಯಕ್ಷರ ಹತ್ಯೆಗೆ ಯತ್ನಿಸಿದ್ದು ಪ್ರಕರಣ. ದಾಳಿಕೋರರು ರಾಜ್ಯಾಧ್ಯಕ್ಷರು ಸೇರಿದಂತೆ ಕಚೇರಿ ಆವರಣದಲ್ಲಿದ್ದ ಆರು ವಾಹನಗಳನ್ನು ಧ್ವಂಸಗೊಳಿಸಿದ್ದರು.

                  ರಾಜ್ಯ ಸರ್ಕಾರದ ವಾದವನ್ನು ನ್ಯಾಯಾಲಯ ತಿರಸ್ಕರಿಸಿರುವುದು ನ್ಯಾಯ ವ್ಯವಸ್ಥೆಗೆ ಸಂದ ಜಯ ಎಂದು ಕೆ.ಸುರೇಂದ್ರನ್ ಹೇಳಿದರು. ಈ ನ್ಯಾಯಾಲಯದ ತೀರ್ಪು ಅಧಿಕಾರದ ಹುನ್ನಾರದಲ್ಲಿ ಏನು ಬೇಕಾದರೂ ಮಾಡಬಲ್ಲ ಕಮ್ಯುನಿಸ್ಟರ ಫ್ಯಾಸಿಸಂಗೆ ಹೊಡೆತವಾಗಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries