HEALTH TIPS

ಉತ್ತರ ಪ್ರದೇಶ: ಶುಕ್ರವಾರದ ಪ್ರಾರ್ಥನೆ ಶಾಂತಿಯುತ

 ಲಖನೌ: ಬಿಜೆಪಿಯ ಮಾಜಿ ವಕ್ತಾರರು ಪ್ರವಾದಿ ಮಹಮ್ಮದ್‌ ಬಗ್ಗೆ ನೀಡಿದ್ದ 'ಅವಹೇಳನಕಾರಿ' ಹೇಳಿಕೆ ವಿರುದ್ಧ ಪ್ರತಿಭಟನೆ ನಡೆದಿದ್ದ ಉತ್ತರ ಪ್ರದೇಶದಲ್ಲಿ ವಾರದ ಬಳಿಕ ಶುಕ್ರವಾರದ ಪ್ರಾರ್ಥನೆ ಶಾಂತಿಯುತವಾಗಿ ನೆರವೇರಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

'ರಾಜ್ಯದಲ್ಲಿ ಎಲ್ಲಿಯೂ ಪ್ರತಿಭಟನೆ ನಡೆದಿರುವ ಬಗ್ಗೆ ವರದಿಯಾಗಿಲ್ಲ, ಪೊಲೀಸರು ಮತ್ತು ಧಾರ್ಮಿಕ ಮುಖಂಡರ ಪ್ರಯತ್ನದಿಂದ ಮಸೀದಿಗಳಲ್ಲಿ ಶುಕ್ರವಾರ‌ದ ಪ್ರಾರ್ಥನೆ ಶಾಂತಿಯುತವಾಗಿ ನಡೆದಿದೆ' ಎಂದು ಎಡಿಜಿ ಪ್ರಶಾಂತ್‌ ಕುಮಾರ್‌ ತಿಳಿಸಿದ್ದಾರೆ.

ಲಖನೌನ ಜಾಮಾ ಮಸೀದಿಯ ಈದ್ಗಾದಲ್ಲಿ ಪ್ರಾರ್ಥನೆಗೂ ಮುನ್ನ ಮಾತನಾಡಿದ ಮೌಲಾನಾ ಮೊಹಮ್ಮದ್‌ ಮುಷ್ತಾಕ್‌ ಅವರು, ಪ್ರತಿಭಟನೆ ನಡೆಸದಂತೆ ಜನರಲ್ಲಿ ಮನವಿ ಮಾಡಿದ್ದರು. ಮಸೀದಿಗಳು ನಮಾಜ್‌ ಮಾಡುವ ಸ್ಥಳ ಹೊರತು ಪ್ರತಿಭಟನೆ ನಡೆಸುವ ಸ್ಥಳವಲ್ಲ ಎಂದೂ ಅವರು ಹೇಳಿದ್ದಾರೆ.

ಲಖನೌನ 'ಟಿಲೆ ವಾಲಿ' ಮಸೀದಿಯಲ್ಲಿ ಪ್ರಾರ್ಥನೆ ಸಲ್ಲಿಸಿದ ಬಳಿಕ ಜನರು ಭದ್ರತಾ ಪಡೆಯ ಸಿಬ್ಬಂದಿಗೆ ಗುಲಾಬಿ ಹೂಗಳನ್ನು ನೀಡಿದರು. ಕಳೆದ ವಾರ ಇಲ್ಲಿ ಪ್ರತಿಭಟನೆ ನಡೆದಿತ್ತು. ಸಹರಾನ್‌ಪುರದಲ್ಲಿ ಮುಂಜಾಗ್ರತಾ ಕ್ರಮವಾಗಿ ಭಾರಿ ಸಂಖ್ಯೆಯಲ್ಲಿ ಪೊಲೀಸರನ್ನು ನಿಯೋಜಿಸಲಾಗಿತ್ತು. ಅಲೀಗಡದಲ್ಲೂ ಯಾವುದೇ ರೀತಿಯ ಪ್ರತಿಭಟನೆಗಳು ನಡೆದಿಲ್ಲ ಎಂದಿದ್ದಾರೆ.

ಪ್ರಯಾಗರಾಜ್‌, ಸಹರಾನ್‌ಪುರ, ಹತ್ರಾಸ್‌, ಅಲೀಗಡ, ಫಿರೋಜಾಬಾದ್‌ ಮತ್ತು ಇತರ ಜಿಲ್ಲೆಗಳಲ್ಲಿ ಪ್ರತಿಭಟನೆ ನಡೆಸಿದ್ದ 400 ಮಂದಿಯನ್ನು ಈಚೆಗೆ ಬಂಧಿಸಲಾಗಿತ್ತು.


Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries