ನವದೆಹಲಿ: ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಸಂಬಂಧಿಸಿದ ಹಣ ಅಕ್ರಮ ವರ್ಗಾವಣೆ ಪ್ರಕರಣದ ವಿಚಾರಣೆಗೆ ಹಾಜರಾಗುವ ದಿನಾಂಕ ಮುಂದೂಡುವಂತೆ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾಗಾಂಧಿ ಅವರು ಸಲ್ಲಿಸಿದ್ದ ಮನವಿಯನ್ನು ಜಾರಿ ನಿರ್ದೇಶನಾಲಯ (ಇ.ಡಿ) ಪುರಸ್ಕರಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
0
samarasasudhi
ಜೂನ್ 23, 2022
ನವದೆಹಲಿ: ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಸಂಬಂಧಿಸಿದ ಹಣ ಅಕ್ರಮ ವರ್ಗಾವಣೆ ಪ್ರಕರಣದ ವಿಚಾರಣೆಗೆ ಹಾಜರಾಗುವ ದಿನಾಂಕ ಮುಂದೂಡುವಂತೆ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾಗಾಂಧಿ ಅವರು ಸಲ್ಲಿಸಿದ್ದ ಮನವಿಯನ್ನು ಜಾರಿ ನಿರ್ದೇಶನಾಲಯ (ಇ.ಡಿ) ಪುರಸ್ಕರಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
'ಈ ಪ್ರಕರಣ ಸಂಬಂಧ ಸೋನಿಯಾ ಅವರ ವಿಚಾರಣೆಯನ್ನು ನಾಲ್ಕು ವಾರಗಳವರೆಗೆ ಮುಂದೂಡಲಾಗಿದೆ. ಜುಲೈ ಕೊನೆ ವಾರದಲ್ಲಿ ಇ.ಡಿ ಮುಂದೆ ಹಾಜರಾಗಿ ಹೇಳಿಕೆ ದಾಖಲಿಸಲು ಅವರಿಗೆ ಸೂಚಿಸಲಾಗಿದೆ' ಎಂದು ಕೇಂದ್ರ ತನಿಖಾ ಸಂಸ್ಥೆಯ ಮೂಲಗಳು ಹೇಳಿವೆ.
ಸೋನಿಯಾ ಅವರಿಗೆ ಜೂನ್ 5ರಂದು ವಿಚಾರಣೆಗೆ ಹಾಜರಾಗುವಂತೆ ಇ.ಡಿ ಮೊದಲ ನೋಟಿಸ್ ನೀಡಿತ್ತು. ಸೋನಿಯಾ ಅವರಿಗೆ ಕೋವಿಡ್ ಸೋಂಕು ಇರುವುದು ದೃಢಪಟ್ಟ ನಂತರ ವಿಚಾರಣೆ ಮುಂದೂಡಿ, ಜೂನ್ 23ರಂದು ವಿಚಾರಣೆಗೆ ಹಾಜರಾಗಲು ಇ.ಡಿ ಎರಡನೇ ನೋಟಿಸ್ ನೀಡಿತ್ತು. ಆದರೆ, ಕೋವಿಡ್ ಮತ್ತು ಶ್ವಾಸಕೋಶದ ಸೋಂಕಿನಿಂದ ಬಳಲುತ್ತಿರುವ ಸೋನಿಯಾ ಅವರು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದಿದ್ದು, ವೈದ್ಯರು ಅವರಿಗೆ ಮನೆಯಲ್ಲಿಯೇ ಇದ್ದು ವಿಶ್ರಾಂತಿ ಪಡೆಯಲು ಸಲಹೆ ನೀಡಿದ್ದಾರೆ.
ಇದೇ ಪ್ರಕರಣ ಸಂಬಂಧ ಸೋನಿಯಾ ಅವರ ಪುತ್ರ ಮತ್ತು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಇ.ಡಿ 5 ದಿನಗಳ ಕಾಲ, ಒಟ್ಟು 54 ಗಂಟೆ ವಿಚಾರಣೆ ನಡೆಸಿದೆ.