ನವದೆಹಲಿ: ರಾಷ್ಟ್ರಪತಿ ಚುನಾವಣೆ ಹಿನ್ನೆಲೆಯಲ್ಲಿ ದ್ರೌಪದಿ ಮುರ್ಮು ಅವರನ್ನು ರಾಷ್ಟ್ರಪತಿ ಅಭ್ಯರ್ಥಿಯನ್ನಾಗಿ ಮಾಡಿದ ಬಿಜೆಪಿ ನೇತೃತ್ವದ ಎನ್ಡಿಎ ನಿರ್ಧಾರವನ್ನು ಆರೆಸ್ಸೆಸ್ ಅಂಗಸಂಸ್ಥೆ 'ಅಖಿಲ ಭಾರತೀಯ ವನವಾಸಿ ಕಲ್ಯಾಣ ಆಶ್ರಮ'ವು ಸ್ವಾಗತಿಸಿದೆ.
0
samarasasudhi
ಜೂನ್ 23, 2022
ನವದೆಹಲಿ: ರಾಷ್ಟ್ರಪತಿ ಚುನಾವಣೆ ಹಿನ್ನೆಲೆಯಲ್ಲಿ ದ್ರೌಪದಿ ಮುರ್ಮು ಅವರನ್ನು ರಾಷ್ಟ್ರಪತಿ ಅಭ್ಯರ್ಥಿಯನ್ನಾಗಿ ಮಾಡಿದ ಬಿಜೆಪಿ ನೇತೃತ್ವದ ಎನ್ಡಿಎ ನಿರ್ಧಾರವನ್ನು ಆರೆಸ್ಸೆಸ್ ಅಂಗಸಂಸ್ಥೆ 'ಅಖಿಲ ಭಾರತೀಯ ವನವಾಸಿ ಕಲ್ಯಾಣ ಆಶ್ರಮ'ವು ಸ್ವಾಗತಿಸಿದೆ.
ಈ ಸಂಬಂಧ ಗುರುವಾರ ಹಿಂದಿಯಲ್ಲಿ ಹೇಳಿಕೆ ಬಿಡುಗಡೆ ಮಾಡಿದ ಆರೆಸ್ಸೆಸ್ ಅಂಗಸಂಸ್ಥೆಯು, ಭಾರತದ ಸಾಂಪ್ರದಾಯಿಕ ಮತ್ತು ಸಂಸ್ಕೃತಿಯ ಭಾಗವಾಗಿರುವ ಹೊರತಾಗಿಯೂ, ಬುಡಕಟ್ಟು ಸಮಾಜವು ಹಲವು ವರ್ಷಗಳ ಕಾಲ ನಿರ್ಲಕ್ಷ್ಯಕ್ಕೆ ಒಳಗಾಗಬೇಕಾಗಿತ್ತು. ಇದೀಗ ಮುರ್ಮು ಅವರನ್ನು ಎನ್ಡಿಎನ ರಾಷ್ಟ್ರಪತಿ ಅಭ್ಯರ್ಥಿಯಾಗಿಸಿರುವುದು ಸಾಮಾಜಿಕ ಬದಲಾವಣೆ ತರುವ ಕ್ರಮವಾಗಿದೆ ಎಂದು ಹೇಳಿದೆ. ಭಾರತದಲ್ಲಿ 12 ಕೋಟಿ ಬುಡಕಟ್ಟು ಜನರಿದ್ದಾರೆ.