HEALTH TIPS

ರಾಜಸ್ತಾನ: ನೂಪುರ್ ಶರ್ಮಾ ಬೆಂಬಲಿಸಿ ಪೋಸ್ಟ್; ಹಾಡಹಗಲೇ ವ್ಯಕ್ತಿಯ ಕತ್ತು ಸೀಳಿ ಬರ್ಬರ ಹತ್ಯೆ

ಉದಯಪುರ: ನೂಪುರ್ ಶರ್ಮಾ ಅವರನ್ನು ಬೆಂಬಲಿಸಿ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದ ಸ್ಥಳೀಯ ಟೇಲರ್ ಅನ್ನು ಹಾಡಹಗಲೇ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ರಾಜಸ್ತಾನದ ಉದಯಪುರದಲ್ಲಿ ನಡೆದಿದೆ. 

10 ದಿನಗಳ ಹಿಂದೆ ಟೇಲರ್ ಕನ್ಹಯ್ಯಾ ಲಾಲ್ ತೇಲಿ ಎಂಬುವರು ಈ ಪೋಸ್ಟ್ ಮಾಡಿದ್ದು ಅಂದಿನಿಂದ ಬೆದರಿಕೆಗಳು ಬರುತ್ತಿದ್ದು, ಈ ಬಗ್ಗೆ ಪೊಲೀಸರಿಗೆ ದೂರು ಕೂಡ ದಾಖಲಿಸಿದ್ದರು.

ಹಗಲು ಹೊತ್ತಿನಲ್ಲಿ ಕನ್ಹಯ್ಯಾ ಅವರ ಅಂಗಡಿಗೆ ನುಗ್ಗಿದ ದುಷ್ಕರ್ಮಿಗಳು ಹರಿತವಾದ ಆಯುಧದಿಂದ ಹಲವು ಬಾರಿ ಹಲ್ಲೆ ನಡೆಸಿ ಕತ್ತು ಸೀಳಿದ್ದಾರೆ. ಈ ಸಂಪೂರ್ಣ ದಾಳಿಯ ವೀಡಿಯೋ ಆನ್‌ಲೈನ್‌ನಲ್ಲಿ ದುಷ್ಕರ್ಮಿಗಳು ಪೋಸ್ಟ್ ಮಾಡಿದ್ದಾರೆ.

40 ವರ್ಷದ ಕನ್ಹಯ್ಯಾಲಾಲ್ ತೇಲಿ ಅವರು ಧನ್ಮಂಡಿಯಲ್ಲಿರುವ ಭೂತಮಹಲ್ ಬಳಿ ಸುಪ್ರೀಂ ಟೈಲರ್ಸ್ ಹೆಸರಿನ ಅಂಗಡಿಯನ್ನು ಹೊಂದಿದ್ದಾರೆ. ಮಂಗಳವಾರ ಮಧ್ಯಾಹ್ನ ಇಬ್ಬರು ದುಷ್ಕರ್ಮಿಗಳು ಬೈಕ್‌ನಲ್ಲಿ ಬಂದು ಅಂಗಡಿಗೆ ನುಗ್ಗಿದ್ದಾರೆ. ಕನ್ಹಯ್ಯಾಲಾಲ್‌ಗೆ ಏನೂ ಅಂತ ಅರ್ಥವಾಗುವಷ್ಟರಲ್ಲಿ ದುಷ್ಕರ್ಮಿಗಳು ಹರಿತವಾದ ಆಯುಧಗಳಿಂದ ದಾಳಿ ನಡೆಸಿದ್ದಾರೆ. ಒಂದರ ನಂತರ ಒಂದರಂತೆ, ಅವರು ಅರ್ಧ ಡಜನ್‌ಗಿಂತಲೂ ಹೆಚ್ಚು ಬಾರಿ ಮೇಲೆ ದಾಳಿ ಮಾಡಿದರು. ತೇಲಿ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ನಂತರ ಇಬ್ಬರೂ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ.

ಭೀಕರ ಹತ್ಯೆ ಬಗ್ಗೆ ಸಿಎಂ ಅಶೋಕ್ ಗೆಹ್ಲೋಟ್ ಪ್ರತಿಕ್ರಿಯೆ
ರಾಜಸ್ತಾನ ಸಿಎಂ ಅಶೋಕ್ ಗೆಹ್ಲೋಟ್ ಈ ಘಟನೆಯನ್ನು ಖಂಡಿಸಿದ್ದು, ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ. ಈ ಘಟನೆಯ ವೀಡಿಯೊವನ್ನು ಹಂಚಿಕೊಳ್ಳುವ ಮೂಲಕ ವಾತಾವರಣವನ್ನು ಹಾಳುಮಾಡಲು ಪ್ರಯತ್ನಿಸಬೇಡಿ ಎಂದು ನಾನು ಎಲ್ಲರಿಗೂ ಮನವಿ ಮಾಡುತ್ತೇನೆ. ವೀಡಿಯೊವನ್ನು ಹಂಚಿಕೊಳ್ಳುವ ಮೂಲಕ, ಸಮಾಜದಲ್ಲಿ ದ್ವೇಷವನ್ನು ಹರಡುವ ಅಪರಾಧಿಯ ಉದ್ದೇಶವು ಯಶಸ್ವಿಯಾಗುತ್ತದೆ ಎಂದು ಅವರು ಹೇಳಿದರು.

Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries