HEALTH TIPS

ಭವಿಷ್ಯದ ವಿದ್ಯಾರ್ಥಿಗಳನ್ನು ಸಜ್ಜುಗೊಳಿಸಲು ಕೇಂದ್ರದಿಂದ' ಪಿಎಂ ಶ್ರೀ ಶಾಲೆಗಳ ಸ್ಥಾಪನೆ'- ಧರ್ಮೇಂದ್ರ ಪ್ರಧಾನ್

ನವದೆಹಲಿ: ಭವಿಷ್ಯದ ವಿದ್ಯಾರ್ಥಿಗಳನ್ನು ಸಜ್ಜುಗೊಳಿಸುವ ಗುರಿಯನ್ನಿಟ್ಟುಕೊಂಡು' ಪಿಎಂ ಶ್ರೀ ಶಾಲೆಗಳ ಸ್ಥಾಪನೆಗೆ ಕೇಂದ್ರ ಸರ್ಕಾರ ಚಿಂತನೆ ನಡೆಸಿದೆ. ಇದು ನೂತನ ರಾಷ್ಟ್ರೀಯ ಶಿಕ್ಷಣ ನೀತಿಯ ಪ್ರಯೋಗಾಲಯವಾಗಲಿದೆ ಎಂದು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಗುರುವಾರ ಹೇಳಿದ್ದಾರೆ.

ಗುಜರಾತಿನಲ್ಲಿ ಎರಡು ದಿನಗಳ ರಾಷ್ಟ್ರದ ಶಿಕ್ಷಣ ಸಚಿವರ ಸಮ್ಮೇಳನದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಜ್ಞಾನಧಾರಿತ ಆರ್ಥಿಕತೆಯ ರಾಷ್ಟ್ರವಾಗಿ ದೇಶ ಹೊರಹೊಮ್ಮುವಲ್ಲಿ ಶಾಲಾ ಶಿಕ್ಷಣ ಅಡಿಪಾಯವಾಗಿದೆ ಎಂದರು. 

ಭವಿಷ್ಯಕ್ಕಾಗಿ ವಿದ್ಯಾರ್ಥಿಗಳನ್ನು ತಯಾರು ಮಾಡಲು' ಪಿಎಂ ಶ್ರೀ ಶಾಲೆಗಳ ಸ್ಥಾಪನೆ ಬಗ್ಗೆ ಪ್ರಕ್ರಿಯೆಗಳು ನಡೆಯುತ್ತಿವೆ ಎಂದು ಕೇಂದ್ರ ಸಚಿವರು ತಿಳಿಸಿದರು. ರಾಜ್ಯಗಳ ಶಿಕ್ಷಣ ಸಚಿವರು ಹಾಜರಾಗಿದ್ದ ಈ ಸಮ್ಮೇಳನದಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ ಅನುಷ್ಟಾನವನ್ನು ವಿರೋಧಿಸಿ ತಮಿಳುನಾಡು ಭಾಗವಹಿಸದೆ ಬಹಿಷ್ಕರಿಸಿದೆ. 

21ನೇ ಶತಮಾನದ ಜ್ಞಾನ ಮತ್ತು ಕೌಶಲ್ಯದಿಂದ ಹೊಸ ಪೀಳಿಗೆ ವಂಚಿತವಾಗಬಾರದು ಎಂದು ಹೇಳಿದ ಸಚಿವರು, ಪಿಎಂ ಶ್ರೀ ಶಾಲೆಗಳ ಮಾದರಿಗಾಗಿ ನೀತಿ ರೂಪಿಸಲು ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಂದ ಪ್ರೋತ್ಸಾಹ ಮತ್ತು ಸಲಹೆಗಳನ್ನು ಪಡೆಯಲು ಇಚ್ಚಿಸುವುದಾಗಿ ತಿಳಿಸಿದರು. 

ಭಾರತವನ್ನು ಜ್ಞಾನಧಾರಿತ ಆರ್ಥಿಕತೆ ರಾಷ್ಟ್ರವನ್ನಾಗಿಸುವಲ್ಲಿ ಮುಂದಿನ 25 ವರ್ಷ ಮಹತ್ವದ್ದಾಗಿದೆ. ನಾವೆಲ್ಲರೂ ಒಗ್ಗಟ್ಟಾಗಿ ಕೆಲಸ ಮಾಡಬೇಕಾಗಿದೆ. ಪರಸ್ಪರ ಅನುಭವಗಳನ್ನು ಯಶಸ್ಸು ಹಂಚಿಕೊಳ್ಳುವ ಮೂಲಕ ಭಾರತವನ್ನು ಉನ್ನತ ಮಟ್ಟಕ್ಕೆ ಕೊಂಡೊಯ್ಯಬೇಕಾಗಿದೆ ಎಂದರು.

ಕರ್ನಾಟಕ, ಒಡಿಶಾ, ದೆಹಲಿ, ಮೇಘಾಲಯ, ಬಿಹಾರ್, ಉತ್ತರ ಪ್ರದೇಶ, ಗುಜರಾತ್ ಮತ್ತು ಹರಿಯಾಣದ ಶಿಕ್ಷಣ ಮಾದರಿಗೆ ಮೆಚ್ಚುಗೆ ವ್ಯಕ್ತಪಡಿಸಿದರು.

Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries