HEALTH TIPS

ಪಿಸಿಯ ಬೆಂಬಿಡದ ಪೋಲೀಸ್: ವಿಚಾರಣೆಗೆ ಹಾಜರಾಗಲು ಮತ್ತೆ ಸೂಚನೆ

                ಕೊಟ್ಟಾಯಂ: ದ್ವೇಷಪೂರಿತ ಭಾಷಣ ಪ್ರಕರಣದಲ್ಲಿ ಜನಪಕ್ಷದ ನಾಯಕ ಪಿಸಿ ಜಾರ್ಜ್ ಅವರಿಗೆ ಮತ್ತೊಂದು ಪೋಲೀಸ್ ನೋಟಿಸ್ ಜಾರಿ ಮಾಡಲಾಗಿದೆ. ಸೋಮವಾರ ಬೆಳಗ್ಗೆ 11 ಗಂಟೆಗೆ ತಿರುವನಂತಪುರಂ ಪೋರ್ಟ್  ಸಹಾಯಕ ಆಯುಕ್ತರ ಕಚೇರಿಗೆ ತಲುಪುವಂತೆ ಸೂಚನೆ ನೀಡಲಾಗಿದೆ. ನಿನ್ನೆ ನೋಟಿಸ್ ನೀಡಲಾಗಿದೆ. ಪಿಸಿ ಜಾಮೀನು ಷರತ್ತುಗಳನ್ನು ಉಲ್ಲಂಘಿಸಿದ್ದಾರೆ ಎಂದು ಆರೋಪಿಸಿ ಹೈಕೋರ್ಟ್ ಮೊರೆ ಹೋಗಲು ಪೋಲೀಸರು ನಿರ್ಧರಿಸಿದ್ದರು. ಆದರೆ, ಪೋಲೀಸರು ಕಾನೂನು ಸಲಹೆ ಪಡೆದು ನಿರ್ಧಾರದಿಂದ ಹಿಂದೆ ಸರಿದಿದ್ದಾರೆ. ಇದರ ಬೆನ್ನಲ್ಲೇ ಪೋಲೀಸರು ಪಿಸಿಗೆ ಮತ್ತೊಂದು ನೋಟಿಸ್ ಜಾರಿ ಮಾಡಿದ್ದಾರೆ.

                    ತೃಕ್ಕಾಕರದಲ್ಲಿ ಪಿಸಿ ಪ್ರಚಾರ ಕಾರ್ಯಕ್ಕೆ ಅಡ್ಡಿಪಡಿಸಲು ಅದೇ ದಿನ ನೋಟಿಸ್ ನೀಡಲಾಗಿದೆ ಎಂದು ಪಿಸಿ ಆರೋಪಿಸಿದರೆ, ಹೈಕೋರ್ಟ್ ಮೆಟ್ಟಿಲೇರಿದಾಗ ನ್ಯಾಯಾಲಯದ ತೀರ್ಪಿನ ಬಗ್ಗೆ ಪೋಲೀಸರು ಚಿಂತಿಸಿದರು.

                   ಆರಂಭದಲ್ಲಿ ಜಾಮೀನು ಷರತ್ತುಗಳನ್ನು ಉಲ್ಲಂಘಿಸಿದ ಆರೋಪವನ್ನು ಪೋಲೀಸರು ಹೊರಿಸಿದ್ದರು. ಭಾನುವಾರ ಹಾಜರಾಗುವಂತೆ ಪೋರ್ಟ್ ಪೋಲೀಸರು ಪಿಸಿಗೆ ನೋಟಿಸ್ ಜಾರಿ ಮಾಡಿದ್ದರು. ಎನ್‍ಡಿಎ ತೃಕ್ಕಾಕರದಲ್ಲಿ ಪ್ರಚಾರ ಮಾಡುವ ನಿರ್ಧಾರವನ್ನು ಪ್ರಕಟಿಸಿದ ನಂತರ ಈ ಸೂಚನೆ ನೀಡಲಾಗಿತ್ತು.  ಸರ್ಕಾರ ಒತ್ತಡಕ್ಕೆ ಮಣಿದು ಪೋಲೀಸರನ್ನು ಬಳಸಿಕೊಂಡು ಪ್ರಚಾರಕ್ಕೆ ಕಡಿವಾಣ ಹಾಕುತ್ತಿದೆ ಎಂದು ಆರೋಪಿಸಿದರು. ತಾವು ಪಕ್ಷವೊಂದರ ರಾಜ್ಯಾಧ್ಯಕ್ಷರಾಗಿದ್ದು, ಉಪಚುನಾವಣೆ ನಡೆಯುತ್ತಿರುವುದರಿಂದ ಪಕ್ಷದ ನಿಲುವುಗಳನ್ನು ಪದಾಧಿಕಾರಿಗಳಿಗೆ ತಿಳಿಸಬೇಕಾಗಿದೆ ಎಂದು ಪಿಸಿ ವಿವರಣೆ ನೀಡಿದ್ದರು.

               ಇದರೊಂದಿಗೆ ಪೋಲೀಸರು ಜಾರ್ಜ್‍ಗೆ ಮತ್ತೊಂದು ನೋಟಿಸ್ ಜಾರಿ ಮಾಡಿದ್ದಾರೆ. ಆದರೆ, ತೃಕ್ಕಾಕರಕ್ಕೆ ಪ್ರಚಾರಕ್ಕೆ ತೆರಳುತ್ತಿದ್ದು, ಕೊಚ್ಚಿ ಹೋಗಿ ತಿರುವನಂತಪುರಂ ತಲುಪಿ ವಿಚಾರಣೆ ಎದುರಿಸಲು ಸಾಧ್ಯವಾಗದು ಎಂದು ಪಿಸಿ ಜಾರ್ಜ್ ಉತ್ತರಿಸಿದರು. ಆರೋಗ್ಯ ತಪಾಸಣೆಗಾಗಿ ವೈದ್ಯರನ್ನು ಭೇಟಿಯಾಗಬೇಕಿದ್ದು, ಪೋಲೀಸರು ಕೋರಿರುವಂತೆ ಭಾನುವಾರದ ನಂತರ ಯಾವುದೇ ಸಮಯದಲ್ಲಿ ವಿಚಾರಣೆಗೆ ಹಾಜರಾಗಬಹುದು ಎಂದು ಪಿಸಿ ಉತ್ತರಿಸಿದ್ದರು.


Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries