ಹಿಂದೂ ದೇವರಿಗೆ ಅವಹೇಳನ ಮಾಡಿದ್ದನ್ನು ವಿರೋಧಿಸಿ ಪ್ರವಾದಿ ಮೊಹಮ್ಮದ್ ಅವರ ಕುರಿತು ಮಾತನಾಡಿದ ಕಾರಣಕ್ಕೆ ಬಿಜೆಪಿಯ ಮಾಜಿ ವಕ್ತಾರೆ ನೂಪುರ್ ಶರ್ಮಾ ವಿರುದ್ಧ ದೇಶ-ವಿದೇಶಗಳಲ್ಲಿ ಭಾರಿ ಪ್ರತಿಭಟನೆ ನಡೆಯುತ್ತಿರುವ ನಡುವೆಯೇ, ನಮಾಜ್ ನಂತರ ದ್ವೇಷ ಭಾಷಣ ಮಾಡದಂತೆ ಹೇಳಿದ ಪೊಲೀಸ್ ಇನ್ಸ್ಪೆಕ್ಟರ್ ಒಬ್ಬರನ್ನು ರಾತ್ರೋರಾತ್ರಿ ವರ್ಗ ಮಾಡಲಾಗಿದೆ!
ಈ ಘಟನೆ ನಡೆದಿರುವುದು ಕೇರಳದಲ್ಲಿ. ಶುಕ್ರವಾರದ ನಮಾಜ್ ನಂತರ ಮಸೀದಿಯಲ್ಲಿ ದ್ವೇಷ ಭಾಷಣ ಮಾಡದಂತೆ ಮಸೀದಿ ಕಮಿಟಿಗೆ ನೋಟಿಸ್ ನೀಡಿದ್ದ ಕಣ್ಣೂರು ಮಯ್ಯಿಲ್ ಪೊಲೀಸ್ ಠಾಣೆಯ ಸ್ಟೇಷನ್ ಹೌಸ್ ಆಫೀಸರ್ ಆಗಿದ್ದ ಬಿಜು ಪ್ರಕಾಶ ಅವರನ್ನು ವರ್ಗಾವಣೆ ಮಾಡಿ ಸರ್ಕಾರ ಆದೇಶಿಸಿದೆ. ಕೋಮು ಸೌಹಾರ್ದ ಹಾಳು ಮಾಡಲು ಯತ್ನಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ನೋಟಿಸ್ನಲ್ಲಿ ಇನ್ಸ್ಪೆಕ್ಟರ್ ಎಚ್ಚರಿಸಿದ್ದರು.
ಈ ನೋಟಿಸ್ ವಿರುದ್ಧ ಮುಸ್ಲಿಂನ ಕೆಲ ಸಂಘಟನೆಗಳು ಆಕ್ರೋಶ ಹೊರಹಾಕಿದ್ದವು. ಸಮ್ಸಾಥಾ ಜಮಾಯುತ್-ಉಲ್ ಉಲೇಮಾ ಸಂಘಟನೆ, ಮುಸ್ಲಿಂ ಲೀಗ್ ಹಾಗೂ ಎಸ್ಡಿಪಿಐ ಸೇರಿದಂತೆ ಕೆಲವು ಸಂಘಟನೆಗಳು ನೋಟಿಸ್ ಅನ್ನು ಖಂಡಿಸಿದ್ದವು. ಅಧಿಕಾರಿಯ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಮುಸ್ಲಿಂ ಲೀಗ್ ಆಗ್ರಹಿಸಿವೆ. ಸುನ್ನಿ ಮಹಲ್ ಫೆಡರೇಶನ್ ಈ ಬಗ್ಗೆ ತನಿಖೆಯಾಗಲಿ ಎಂದು ಹೇಳಿದೆ. ಪೊಲೀಸ್ ಅಧಿಕಾರಿ ತಮಗೆ ಅವಮಾನ ಮಾಡಿರುವುದಾಗಿ ಸಂಘಟನೆಗಳು ಆಕ್ರೋಶ ಹೊರಹಾಕಿವೆ.
ಇನ್ನೊಂದೆಡೆ, ಇನ್ಸ್ಪೆಕ್ಟರ್ ಅವರನ್ನು ವರ್ಗ ಮಾಡಿರುವುದು ತೀವ್ರ ಟೀಕೆಗೆ ಗುರಿಯಾಗುತ್ತಿದ್ದಂತೆಯೇ ಸ್ಪಷ್ಟನೆ ನೀಡಿದ ಸರ್ಕಾರ, 'ಸ್ಟೇಷನ್ ಹೌಸ್ ಆಫೀಸರ್ ಸರ್ಕಾರದ ನಿಯಮಕ್ಕೆ ವಿರುದ್ಧವಾಗಿ ನೋಟಿಸ್ ಕಳುಹಿಸಿದ್ದಾರೆ. ಹಾಗಾಗಿ ಅವರಿಗೆ ವರ್ಗ ಮಾಡಿದ್ದೇನೆ ಎಂದಿದೆ.