HEALTH TIPS

ಪ್ರತಿ ಮಸೀದಿಯಲ್ಲಿ ಶಿವಲಿಂಗ ಹುಡುಕೋ ಅಗತ್ಯ ಇಲ್ಲ: ಆರ್ ಎಸ್ ಎಸ್ ಕಾರ್ಯಕರ್ತರಿಗೆ ಮೋಹನ್ ಭಾಗವತ್ ಕಿವಿಮಾತು!

ನವದೆಹಲಿ: ಪ್ರತಿ ಮಸೀದಿಯಲ್ಲಿ ಶಿವಲಿಂಗವನ್ನು ಹುಡುಕುವ ಮತ್ತು ಪ್ರತಿದಿನ ಹೊಸ ವಿವಾದವನ್ನು ಪ್ರಾರಂಭಿಸುವ ಅಗತ್ಯವಿಲ್ಲ ಎಂದು ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಗುರುವಾರ ಹೇಳಿದ್ದಾರೆ.

ಜ್ಞಾನವಾಪಿ ಮಸೀದಿಯಲ್ಲಿ ಕೋರ್ಟ್ ಆದೇಶದ ಮೇರೆಗೆ ನಡೆದ ವಿಡಿಯೊ ಸಮೀಕ್ಷೆಯಲ್ಲಿ ಶಿವಲಿಂಗದಂಥ ಆಕೃತಿ ಪತ್ತೆಯಾಗಿದೆ ಎಂಬ ವರದಿಗಳು ಬಹಿರಂಗವಾದ ನಂತರ ಹಿಂದೂ-ಮುಸ್ಲಿಂ ಸಮುದಾಯಗಳ ನಡುವೆ ವೈಮನಸ್ಸು ಮೂಡುವ ಬೆಳವಣಿಗೆಗಳು ನಡೆದಿತ್ತು. ಪ್ರಸ್ತುತ ಈ ಪ್ರಕರಣವು ಇನ್ನೂ ನ್ಯಾಯಾಲಯದಲ್ಲಿ ವಿಚಾರಣೆಯ ಹಂತದಲ್ಲಿದೆ. ಇದೀಗ ಆರ್​ಎಸ್​ಎಸ್​ ಮುಖ್ಯಸ್ಥರು ನೀಡಿರುವ ಹೇಳಿಕೆಯು ಹಲವು ಕಾರಣಗಳಿಂದ ಮಹತ್ವ ಪಡೆದಿದೆ.

ಕೆಲವು ಪ್ರದೇಶಗಳ ಬಗ್ಗೆ ನಮಗೆ ಭಕ್ತಿ ಇರುತ್ತದೆ. ಅದರ ಬಗ್ಗೆ ನಾವು ಮಾತನಾಡುತ್ತಿರುತ್ತೇವೆ. ಆದರೆ ಪ್ರತಿದಿನ ಹೊಸಹೊಸ ಸ್ಥಳಗಳ ಬಗ್ಗೆ ಪ್ರಸ್ತಾಪಿಸುವುದು ಸರಿಯಾಗಲಾರದು. ನಾವು ಪ್ರತಿದಿನ ಹೊಸಹೊಸ ವಿವಾದಗಳನ್ನು ಹುಟ್ಟುಹಾಕಬಾರದು. ಜ್ಞಾನವಾಪಿ ಮಸೀದಿ ಬಗ್ಗೆ ನಮಗೆ ಶ್ರದ್ಧೆಯಿದೆ. ಆ ವಿಚಾರದಲ್ಲಿ ನಾವು ಏನು ಮಾಡುತ್ತಿದ್ದೇವೆಯೋ ಅದು ಆ ಶ್ರದ್ಧೆಗೆ ಅನುಗುಣವಾಗಿದೆ. ಹಾಗೆಂದು ಎಲ್ಲ ಮಸೀದಿಗಳಲ್ಲಿ ಶಿವಲಿಂಗ ಹುಡುಕುವುದು ಸರಿಯೇ’ ಎಂದು ಪ್ರಶ್ನಿಸಿದರು.

ಜ್ಞಾನವಾಪಿ ಮಸೀದಿ ವಿವಾದವನ್ನು ಮತ್ತೊಂದು ಅಯೋಧ್ಯೆ ವಿವಾದವಾಗಿಸಬೇಕು ಎನ್ನುವ ಪ್ರಯತ್ನಗಳಿಗೆ ಭಾಗವತ್ ಅವರ ಈ ಹೇಳಿಕೆ ತಣ್ಣೀರು ಎರಚಿದೆ. ಬೀದಿಬೀದಿಗಳಲ್ಲಿ ಪ್ರತಿಭಟನೆಗಳನ್ನು ನಡೆಸುವ ಮೂಲಕ ಇದನ್ನೊಂದು ದೇಶವ್ಯಾಪಿ ಜನಾಂದೋಲನವಾಗಿಸಬೇಕು ಎಂದು ಹಿಂದುತ್ವ ಪರ ಹೋರಾಟಗಾರರು ಯತ್ನಿಸುತ್ತಿದ್ದರು. ಇಂಥ ಪ್ರಯತ್ನಗಳನ್ನು ಆರ್​ಎಸ್​ಎಸ್​ ಸಮರ್ಥಿಸುವುದಿಲ್ಲ ಎಂದು ಮೋಹನ್ ಭಾಗವತ್ ಇದೀಗ ಸ್ಪಷ್ಟಪಡಿಸಿದ್ದಾರೆ.

ಜ್ಞಾನವಾಪಿ ವಿವಾದವು ನಂಬಿಕೆಯ ಕೆಲವು ಸಮಸ್ಯೆಗಳನ್ನು ಒಳಗೊಂಡಿದ್ದು, ನ್ಯಾಯಾಲಯದ ತೀರ್ಪನ್ನು ಎಲ್ಲರೂ ಒಪ್ಪಿಕೊಳ್ಳಬೇಕು, ಆದರೆ ಪ್ರತಿ ಮಸೀದಿಯಲ್ಲಿ ಶಿವಲಿಂಗವನ್ನು ಹುಡುಕುವ ಮತ್ತು ಪ್ರತಿದಿನ ಹೊಸ ವಿವಾದವನ್ನು ಪ್ರಾರಂಭಿಸುವ ಅಗತ್ಯವಿಲ್ಲ ಎಂದು  ಮೋಹನ್ ಭಾಗವತ್ ತಿಳಿಸಿದ್ದಾರೆ. ಜಗಳವನ್ನು ಏಕೆ ಹೆಚ್ಚಿಸಬೇಕು? ಪ್ರತಿ ಮಸೀದಿಯಲ್ಲಿ ಶಿವಲಿಂಗವನ್ನು ಏಕೆ ಹುಡುಕಬೇಕು? ಎಂದು ಮೋಹನ್ ಭಾಗವತ್ ಪ್ರಶ್ನಿಸಿದ್ದಾರೆ. ಜ್ಞಾನವಾಪಿ ಮಸೀದಿ ಪ್ರಕರಣದ ಕುರಿತು ಮಾತನಾಡಿದ ಮೋಹನ್ ಭಾಗವತ್, ಈಗ ಜ್ಞಾನವಾಪಿ ಮಸೀದಿಯ ವಿಷಯ ನಡೆಯುತ್ತಿದೆ. ನಾವು ಬದಲಾಯಿಸಲಾಗದ ಇತಿಹಾಸವಿದೆ. ನಾವು ಆ ಇತಿಹಾಸವನ್ನು ಬರೆದಿಲ್ಲ, ಈಗಿನ ಹಿಂದೂಗಳೂ ಅಲ್ಲ, ಮುಸ್ಲಿಮರೂ ಅಲ್ಲ. ಇದು ಹಿಂದೆ ಸಂಭವಿಸಿತು ಎಂದಿದ್ದಾರೆ.

ಇಸ್ಲಾಂ ಧರ್ಮ ಬಂದಾಗ, ಭಾರತೀಯರ ನೈತಿಕ ಸ್ಥೈರ್ಯವನ್ನು ಮುರಿಯಲು, ಸಾವಿರಾರು ದೇವಾಲಯಗಳು ನಾಶವಾದವು". ನಮಾಜ್  ಕೂಡ ಒಂದು ಪೂಜೆ. ಅವರು ನಮ್ಮ ಪೂರ್ವಜರಿಂದ ಬಂದವರು. ನಾವು ಯಾವುದೇ ರೀತಿಯ 'ಪೂಜೆ'ಯ ವಿರುದ್ಧವಾಗಿಲ್ಲ ಎಂದು ಭಾಗವತ್ ಸ್ಪಷ್ಟಪಡಿಸಿದ್ದಾರೆ.

Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries