HEALTH TIPS

ಸಿಡಿಎಸ್ ನೇಮಕಾತಿ ಪ್ರಕ್ರಿಯೆ ಪ್ರಗತಿಯಲ್ಲಿದೆ: ರಾಜನಾಥ್ ಸಿಂಗ್

 ನವದೆಹಲಿ: ಸೇನಾಪಡೆಗಳ ಮುಖ್ಯಸ್ಥರ (ಸಿಡಿಎಸ್‌) ನೇಮಕಾತಿ ಪ್ರಕ್ರಿಯೆ ಪ್ರಗತಿಯಲ್ಲಿದೆ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿದರು.

2021ರ ಡಿಸೆಂಬರ್ 8ರಂದು ತಮಿಳುನಾಡಿನ ಕೂನೂರಿನಲ್ಲಿ ಸಂಭವಿಸಿದ ಹೆಲಿಕಾಪ್ಟರ್ ಅಪಘಾತದಲ್ಲಿ ಜನರಲ್ ಬಿಪಿನ್ ರಾವತ್ ಅವರು ಹುತಾತ್ಮರಾಗಿದ್ದರು.

ಆ ಬಳಿಕ ಸಿಡಿಎಸ್‌ ಹುದ್ದೆ ತೆರವಾಗಿದೆ.

ಕೇಂದ್ರ ಸರ್ಕಾರದ ನೂತನ 'ಅಗ್ನಿಪಥ್' ಯೋಜನೆ ಘೋಷಿಸಿದ ಬಳಿಕ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ರಾಜನಾಥ್ ಸಿಂಗ್, 'ಶೀಘ್ರದಲ್ಲೇ ಸಿಡಿಎಸ್ ನೇಮಕಾತಿ ಆಗಲಿದೆ. ನೇಮಕಾತಿ ಪ್ರಕ್ರಿಯೆ ಪ್ರಗತಿಯಲ್ಲಿದೆ' ಎಂದು ಹೇಳಿದರು.

ಈ ತಿಂಗಳ ಆರಂಭದಲ್ಲಿ ಸಿಡಿಎಸ್ ನೇಮಕಾತಿಗೆ ಸುತ್ತೋಲೆ ಹೊರಡಿಸಲಾಗಿತ್ತು.

ಹೊಸ ನಿಯಮದ ಪ್ರಕಾರ, ಸೇವೆಯಲ್ಲಿರುವ ಅಥವಾ 62ಕ್ಕಿಂತ ಕಡಿಮೆ ವಯಸ್ಸಿನ ನಿವೃತ್ತ ಲೆಫ್ಟಿನೆಂಟ್ ಜನರಲ್, ಏರ್ ಮಾರ್ಷಲ್ ಹಾಗೂ ವೈಸ್-ಅಡ್ಮಿರಲ್ ಸಿಡಿಎಸ್ ಹುದ್ದೆಗೆ ಅರ್ಹರಾಗಿದ್ದಾರೆ.

ಬಿಪಿನ್ ರಾವತ್ ಅವರು 2020ರ ಜನವರಿ 1ರಂದು ದೇಶದ ಮೊದಲ ಸಿಡಿಎಸ್ ಆಗಿ ಅಧಿಕಾರ ಸ್ವೀಕರಿಸಿದ್ದರು.


Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries