HEALTH TIPS

ಧಾರ್ಮಿಕ ವೈಷಮ್ಯ ಸೃಷ್ಟಿಸುವ ಪ್ರಯತ್ನ; ಆನ್‍ಲೈನ್ ಚಾನೆಲ್ ಮತ್ತು ಆಂಕರ್ ವಿರುದ್ಧ ಪ್ರಕರಣ ದಾಖಲಿಸಲು ಕೋರ್ಟ್ ಆದೇಶ

     

                      ತ್ರಿಶೂರ್: ಧಾರ್ಮಿಕ ವೈಷಮ್ಯ ಸೃಷ್ಟಿಸಲು ಯತ್ನಿಸಿದ ದೂರಿನ ಮೇರೆಗೆ ಆನ್‍ಲೈನ್ ಚಾನೆಲ್ ಮತ್ತು ಆಂಕರ್ ವಿರುದ್ಧ ಪ್ರಕರಣ ದಾಖಲಿಸುವಂತೆ ನ್ಯಾಯಾಲಯ ಆದೇಶಿಸಿದೆ. ವಡಕಂಚೇರಿ ಜುಡಿಷಿಯಲ್ ಪ್ರಥಮ ದರ್ಜೆ ಮ್ಯಾಜಿಸ್ಟ್ರೇಟ್ ನ್ಯಾಯಾಲಯವು ಆನ್‍ಲೈನ್ ಚಾನೆಲ್, ತ್ರಿಶೂರ್‍ನ ಕೇರಳ ಪ್ರಕಲಗಮ್ ಚಾನೆಲ್ ಮತ್ತು ನಿರೂಪಕರ ವಿರುದ್ಧ ಆದೇಶ ಹೊರಡಿಸಿದೆ.

                ಎರುಮಪೆಟ್ಟಿ ಗ್ರಾಮ ಪಂಚಾಯಿತಿಯ ಹದಿನೇಳನೇ ವಾರ್ಡ್‍ನಲ್ಲಿ ಹೊಸದಾಗಿ ನಿರ್ಮಿಸಲಾದ ರಸ್ತೆಗೆ ಸಂಬಂಧಿಸಿದ ಸುದ್ದಿಗಳು ಕೋಮು ದ್ವೇಷವನ್ನು ಹರಡುತ್ತಿದೆ ಎಂಬ ದೂರಿನ ಮೇರೆಗೆ ಕುನ್ನಂಕುಳಂನ ಎರುಮಪೆಟ್ಟಿ ಪಲ್ಲಿಪುರಂ ವಳಪ್‍ನಲ್ಲಿ ಚಾನೆಲ್ ಮತ್ತು ನಿರೂಪಕ ಕಬೀರ್ ವಿರುದ್ಧ ಪ್ರಕರಣ ದಾಖಲಿಸಲು ನ್ಯಾಯಾಲಯ ಆದೇಶಿಸಿದೆ.

                   ಭಾರತೀಯ ದಂಡ ಸಂಹಿತೆಯ ಸೆಕ್ಷನ್ 153(ಎ) ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುವಂತೆ ಆದೇಶ ನೀಡಲಾಗಿದೆ. ಬಿಜೆಪಿ ಎರುಮಪೆಟ್ಟಿ ಕ್ಷೇತ್ರದ ಪ್ರಧಾನ ಕಾರ್ಯದರ್ಶಿ ಕೆ.ರಾಜೇಶ್ ಕುಮಾರ್ ಈ ಕುರಿತು ಎರುಮಪೆಟ್ಟಿ ಪೋಲೀಸರು ಹಾಗೂ ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿಗೆ ದೂರು ನೀಡಿದ್ದರು. ಆದರೆ ದೂರು ದಾಖಲಿಸಿಕೊಂಡ ಪೋಲೀಸರು ಪ್ರಕರಣ ದಾಖಲಿಸಿಕೊಳ್ಳದ್ದರಿಂದ  ವಕೀಲರಾದ ಎಂ.ಹರಿಕಿರಣ್, ವಿ. ವಿನೀತ್ ಮೂಲಕ ನ್ಯಾಯಾಲಯದ ಮೊರೆ ಹೋಗಿದ್ದನ್ನು ಆಧರಿಸಿ ಈ ಆದೇಶ ನೀಡಲಾಗಿದೆ.


Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries