HEALTH TIPS

ಅಮರನಾಥ ಮೇಘಸ್ಫೋಟ ದುರಂತ: ಈಗ ಕೇದಾರನಾಥ ಯಾತ್ರೆ ಸ್ಥಗಿತ!

            ಅಮರನಾಥ ಗುಹಾ ದೇಗುಲದ ಬಳಿ ಸಂಭವಿಸಿದ ಮೇಘಾಸ್ಫೋಟದಿಂದಾಗಿ ಹಠಾತ್ ಸಂಭವಿಸಿದ ಪ್ರವಾಹದಲ್ಲಿ 16 ಮಂದಿ ಮೃತಪಟ್ಟು ಹಲವರು ನಾಪತ್ತೆಯಾಗಿರುವ ಹಿನ್ನೆಲೆಯಲ್ಲಿ ಕೇದಾರನಾಥ ಯಾತ್ರೆಯನ್ನು ಸ್ಥಗಿತಗೊಳಿಸಲಾಗಿದೆ.

                  ಸೋನಪ್ರಯಾಗದಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕಾ ಕ್ರಮ ಹಾಗೂ ಯಾತ್ರಾರ್ಥಿಗಳ ಸುರಕ್ಷತೆಯ ದೃಷ್ಟಿಯಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ರುದ್ರಪ್ರಯಾಗ ಜಿಲ್ಲಾಡಳಿತ ತಿಳಿಸಿದೆ.

               ಅಮರನಾಥ ಗುಹಾ ದೇಗುಲದ ಸಮೀಪವಿರುವ ಟೆಂಟ್‌ಗಳು ಮತ್ತು ಸಮುದಾಯ ಅಡುಗೆಮನೆಗಳು ಶುಕ್ರವಾರ ಸಂಜೆ ಸುರಿದ ಮಳೆಯ ನಂತರ ನೀರಿನ ರಭಸದಿಂದ ಹರಿದು ಬಂದ ಮಣ್ಣು ಮತ್ತು ಕಲ್ಲುಗಳಿಂದ ಜಖಂಗೊಂಡಿವೆ. ಇದು ಹೆಚ್ಚು ಸ್ಥಳೀಕರಣಗೊಂಡ ಮೋಡವಾಗಿತ್ತು. ಅಂತಹ ಮಳೆ ಈ ವರ್ಷದ ಆರಂಭದಲ್ಲಿಯೂ ಇಂತಹ ಘಟನೆಗಳು ಸಂಭವಿಸಿತ್ತು. 

                 ಅಮರನಾಥ ಗುಹೆಯ ಬಳಿ ಹಠಾತ್ ಪ್ರವಾಹದ ನಂತರ ಅಲ್ಲಿ ಸಿಲುಕಿದ್ದ 15 ಸಾವಿರ ಯಾತ್ರಿಕರನ್ನು ಪಂಜತರ್ನಿ ಮೂಲ ಶಿಬಿರಕ್ಕೆ ಸ್ಥಳಾಂತರಿಸಲಾಗಿದೆ. 



Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries