HEALTH TIPS

ಉಪ ರಾಷ್ಟ್ರಪತಿ ಅಭ್ಯರ್ಥಿಯಾಗಿ ಎನ್​ಡಿಎನಿಂದ ಜಗದೀಪ್​ ಧನಕರ್

              ನವದೆಹಲಿ: ದ್ರೌಪದಿ ಮುರ್ಮು ಅವರನ್ನು ತಮ್ಮ ಕಡೆಯಿಂದ ರಾಷ್ಟ್ರಪತಿ ಅಭ್ಯರ್ಥಿಯಾಗಿ ಘೋಷಿಸಿರುವ ಬಿಜೆಪಿ ನೇತೃತ್ವದ ಎನ್​ಡಿಎ, ಇದೀಗ ಉಪ ರಾಷ್ಟ್ರಪತಿ ಅಭ್ಯರ್ಥಿಯ ಹೆಸರನ್ನೂ ಘೋಷಣೆ ಮಾಡಿದೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರು ಈ ಘೋಷಣೆಯನ್ನು ಮಾಡಿದ್ದಾರೆ.

            ಪಶ್ಚಿಮ ಬಂಗಾಲದ ರಾಜ್ಯಪಾಲರಾಗಿರುವ ಜಗದೀಪ್​ ಧನಕರ್ ಅವರನ್ನು ಉಪ ರಾಷ್ಟ್ರಪತಿ ಅಭ್ಯರ್ಥಿಯಾಗಿ ಎನ್​ಡಿಎ ಕಣಕ್ಕಿಳಿಸಲಿದ್ದು, ಅವರ ಆಯ್ಕೆಯನ್ನು ಜೆ.ಪಿ. ನಡ್ಡಾ ಇಂದು ದೆಹಲಿಯಲ್ಲಿ ನಡೆದ ಸಂಸದೀಯ ಸಮಿತಿಯ ಸಭೆಯಲ್ಲಿ ಅಧಿಕೃತವಾಗಿ ಘೋಷಿಸಿದ್ದಾರೆ.

                 ಜಗದೀಪ್ ಅವರು ರೈತಪುತ್ರ, ಜನರ ರಾಜ್ಯಪಾಲರೆಂದೇ ಗುರುತಿಸಿಕೊಂಡಿರುವ ಅವರು ಎನ್​ಡಿಯ ಮೈತ್ರಿಕೂಟದಿಂದ ಉಪ ರಾಷ್ಟ್ರಪತಿ ಸ್ಥಾನಕ್ಕೆ ಸ್ಪರ್ಧಿಸಲಿದ್ದಾರೆ ಎಂದು ನಡ್ಡಾ ತಿಳಿಸಿದ್ದಾರೆ.      

              ಪಶ್ಚಿಮ ಬಂಗಾಲದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮತ್ತು ಜಗದೀಪ್ ಅವರ ಮಧ್ಯೆ ಹಲವಾರು ವಿಷಯಗಳಿಗೆ ಸಂಬಂಧಿಸಿದಂತೆ ಸಂಘರ್ಷ ಉಂಟಾಗಿವೆ.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries