ಎರ್ನಾಕುಳಂ: ಕಿರುಕುಳ ಪ್ರಕರಣದಲ್ಲಿ ಪಿಸಿ ಜಾರ್ಜ್ಗೆ ಜಾಮೀನು ಮಂಜೂರು ಮಾಡಿರುವ ಕೆಳ ನ್ಯಾಯಾಲಯದ ಆದೇಶದ ವಿರುದ್ಧ ದೂರುದಾರೆ ನಿನ್ನೆ ಹೈಕೋರ್ಟ್ನ ಮೊರೆ ಹೋಗಿರುವರು. ತಿರುವನಂತಪುರಂ ಮ್ಯಾಜಿಸ್ಟ್ರೇಟ್ ನ್ಯಾಯಾಲಯದ ಜಾಮೀನು ಆದೇಶವನ್ನು ರದ್ದುಗೊಳಿಸುವಂತೆ ಅರ್ಜಿ ಸಲ್ಲಿಸಲಾಗಿದೆ. ಸರ್ಕಾರವೂ ಇದೇ ಬೇಡಿಕೆಯೊಂದಿಗೆ ಮೇಲ್ಮನವಿ ಸಲ್ಲಿಸಬಹುದು. ಮ್ಯೂಸಿಯಂ ಪೋಲೀಸರು ದಾಖಲಿಸಿರುವ ಪ್ರಕರಣದಲ್ಲಿ ಕಿರುಕುಳ ಯತ್ನದ ಸೆಕ್ಷನ್ 375 ಅನ್ನು ಸೇರಿಸಲು ದೂರುದಾರರು ಹೈಕೋರ್ಟ್ಗೆ ಮನವಿ ಮಾಡಿದ್ದಾರೆ.
ಸೋಲಾರ್ ವಂಚನೆ ಪ್ರಕರಣದ ಆರೋಪಿಗಳ ಕಿರುಕುಳದ ದೂರಿನ ಮೇರೆಗೆ ಪಿಸಿ ಜಾರ್ಜ್ ವಿರುದ್ಧ ಪೋಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಶನಿವಾರ ಮಹಿಳೆ ಕಿರುಕುಳದ ಆರೋಪ ನೀಡಿ ಪೆÇಲೀಸರಿಗೆ ದೂರು ನೀಡಿದ್ದರು. ಪ್ರಕರಣದಲ್ಲಿ ಬಂಧಿತರಾಗಿದ್ದ ಪಿಸಿ ಜಾರ್ಜ್ಗೂ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.
ಕಳೆದ ಫೆಬ್ರವರಿಯಲ್ಲಿ ಸೋಲಾರ್ ವಂಚನೆ ಪ್ರಕರಣದ ಆರೋಪಿತೆಯು ಜಾರ್ಜ್ ತನಗೆ ಕಿರುಕುಳ ನೀಡಲು ಯತ್ನಿಸಿದ್ದಾಗಿ ಪೋಲೀಸರಿಗೆ ದೂರು ನೀಡಿದ್ದಳು.
ತೈಕ್ಕಾಡ್ ಅತಿಥಿಗೃಹದಲ್ಲಿ ಲೈಂಗಿಕ ದೌರ್ಜನ್ಯ ಎಸಗಿದ್ದು, ಫೆÇೀನ್ ಮೂಲಕ ಅಶ್ಲೀಲ ಸಂದೇಶಗಳನ್ನು ಕಳುಹಿಸಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಈ ಬಗ್ಗೆ ದೂರುದಾರರು ಗೌಪ್ಯ ಹೇಳಿಕೆಯನ್ನೂ ನೀಡಿದ್ದಾರೆ ಎಂದು ಪೋಲೀಸರು ತಿಳಿಸಿದ್ದಾರೆ.