ಬದಿಯಡ್ಕ: ಕುಂಬ್ಡಾಜೆ ಕಜೆಮಲೆಯ ಪುಟ್ಟ ಬಾಲಕಿ ಸಾನ್ವಿಯ ಚಿಕಿತ್ಸೆಗಾಗಿ ಕಾಸರಗೋಡು ಜಿಲ್ಲಾ ಮೊಗೇರ ಸಂಘದ ವತಿಯಿಂದ ಸಂಗ್ರಹಿಸಲಾದ 13,500 ರೂಪಾಯಿ ಮೊತ್ತವನ್ನು ಚಿಕಿತ್ಸಾ ಸಮಿತಿ ಅಧ್ಯಕ್ಷ ಕುಂಬ್ಡಾಜೆ ಗ್ರಾಮಪಂಚಾಯಿತಿ ಅಧ್ಯಕ್ಷ ಹಮೀದ್ ಪೊಸೊಳಿಗೆ ಅವರಿಗೆ ಜಿಲ್ಲಾ ಅಧ್ಯಕ್ಷ ರಾಮಪ್ಪ ಮಂಜೇಶ್ವರ ಅವರ ನೇತೃತ್ವದಲ್ಲಿ ಹಸ್ತಾಂತರಿಸಲಾಯಿತು. ಮೊಗೇರ ಸಂಘದ ಗೌರವಾಧ್ಯಕ್ಷ ಕೃಷ್ಣದಾಸ್ ದರ್ಬೆತಡ್ಕ, ಕಾರ್ಯದರ್ಶಿ ಹರಿಶ್ಚಂದ್ರ ಪುತ್ತಿಗೆ, ಸಂಘಟನಾ ಕಾರ್ಯದರ್ಶಿ ಸುಧಾಕರ ಬೆಳ್ಳಿಗೆ, ಉಪಾಧ್ಯಕ್ಷ ಗೋಪಾಲ ದರ್ಬೆತಡ್ಕ, ಮಹಿಳಾ ಸಮಿತಿ ಕಾರ್ಯದರ್ಶಿ ಸುಂದರಿ ಗೋಪಾಲ ಉಪಸ್ಥಿತರಿದ್ದರು.