HEALTH TIPS

ರಾಜ್ಯಸಭೆಗೆ ಪಿಟಿ ಉಷಾ; ಅಭಿಂದಿಸಿದ ಪ್ರಧಾನಿ ಮೋದಿ

                  ನವದೆಹಲಿ: ಒಲಿಂಪಿಯನ್ ಪಿಟಿ ಉಷಾ ಅವರು ರಾಜ್ಯಸಭೆಗೆ ನಾಮನಿರ್ದೇಶನಗೊಂಡಿದ್ದಾರೆ. ಬಿಜೆಪಿ ಪಿಟಿ ಉಷಾ ಅವರನ್ನು ರಾಜ್ಯಸಭೆಗೆ ನಾಮನಿರ್ದೇಶನ ಮಾಡಿದೆ. ಪಿಟಿ ಉಷಾ ಅವರು ನಾಮನಿರ್ದೇಶಿತ ಸದಸ್ಯರಾಗಿ ರಾಜ್ಯಸಭೆಯಲ್ಲಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಪಿಟಿ ಉಷಾ ಅವರು ಎಲ್ಲ ಭಾರತೀಯರಿಗೆ ಸ್ಪೂರ್ತಿಯಾಗಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಪಿಟಿ ಉಷಾ ಅವರೊಂದಿಗಿನ ಚಿತ್ರದೊಂದಿಗೆ ಪ್ರಧಾನಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

              ಗೌರವಾನ್ವಿತ ಪಿಟಿ ಉಷಾ ಪ್ರತಿಯೊಬ್ಬ ಭಾರತೀಯನಿಗೂ ಸ್ಫೂರ್ತಿಯಾಗಿದ್ದಾರೆ. ಅವರು ಕ್ರೀಡಾ ಕ್ಷೇತ್ರಕ್ಕೆ ನೀಡಿದ ಕೊಡುಗೆಗಳು ಚಿರಪರಿಚಿತ. ಇದಲ್ಲದೆ, ಯುವ ಕ್ರೀಡಾಪಟುಗಳಿಗೆ ಕೊಡುಗೆ ನೀಡಲು ಅವರ ಪ್ರಯತ್ನಗಳು ಅಷ್ಟೇ ಮುಖ್ಯವಾಗಿವೆ. ರಾಜ್ಯಸಭೆಗೆ ನಾಮನಿರ್ದೇಶನಗೊಂಡಿರುವುದಕ್ಕೆ ಅಭಿನಂದನೆಗಳು. ಎಂದು ಪ್ರಧಾನಿ ಟ್ವೀಟ್ ಮಾಡಿದ್ದಾರೆ.

                 ಪಿಟಿ ಉಷಾ ಅವರೊಂದಿಗೆ ಸಂಗೀತ ನಿರ್ದೇಶಕ ಇಳಯರಾಜ, ಚಿತ್ರಕಥೆಗಾರ ಮತ್ತು ನಿರ್ದೇಶಕ ವಿ ವಿಜಯೇಂದ್ರ ಪ್ರಸಾದ್ ಮತ್ತು ಧರ್ಮಸ್ಥಳ ಶ್ರೀಕ್ಷೇತ್ರದ ಧರ್ಮಾಧಿಕಾರಿ ಮತ್ತು ಸಾಮಾಜಿಕ ಕಾರ್ಯಕರ್ತ ವೀರೇಂದ್ರ ಹೆಗ್ಗಡೆ ಕೂಡ ರಾಜ್ಯಸಭೆಗೆ ನಾಮನಿರ್ದೇಶನಗೊಂಡಿದ್ದಾರೆ.


Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries