HEALTH TIPS

ನೌಕರರಿಗೆ 103 ಕೋಟಿ ಪಾವತಿ ಸಾಧ್ಯವಿಲ್ಲ; ಕೆ.ಎಸ್.ಆರ್.ಟಿಸಿ.ಯನ್ನು ಕೈಬಿಟ್ಟ ಸರ್ಕಾರ


         ಕೊಚ್ಚಿ: ಕೆ.ಎಸ್.ಆರ್.ಟಿ.ಸಿ ನೌಕರರಿಗೆ 103 ಕೋಟಿ ರೂ. ಪಾವತಿಸಲು ಸಾಧ್ಯವಿಲ್ಲ ಎಂದು ಹೈಕೋರ್ಟ್‍ನಲ್ಲಿ ಸರ್ಕಾರ ಹೇಳಿದೆ.
     ವೇತನಕ್ಕೆ ಆರ್ಥಿಕ ನೆರವು ನೀಡುವಂತೆ ಸಿಂಗಲ್ ಬೆಂಚ್ ಆದೇಶದ ವಿರುದ್ಧ ಸರ್ಕಾರ ಮೇಲ್ಮನವಿ ಸಲ್ಲಿಸಿತ್ತು. ಕೆಎಸ್‍ಆರ್‍ಟಿಸಿ ನೌಕರರಿಗೆ ವೇತನ ನೀಡಲು ಸರ್ಕಾರ ಬಾಧ್ಯತೆ ಹೊಂದಿಲ್ಲ ಎಂದು ಹೈಕೋರ್ಟ್‍ಗೆ ತಿಳಿಸಿದೆ.
       ಕೆಎಸ್‍ಆರ್‍ಟಿಸಿ ಆರ್ಥಿಕ ಮುಗ್ಗಟ್ಟು ಎದುರಿಸುತ್ತಿರುವ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 1ರೊಳಗೆ 103 ಕೊÀ್ದಟಿ ರೂ.ಗಳನ್ನು ಪಾವತಿಸಬೇಕು ಎಂದು ನ್ಯಾಯಮೂರ್ತಿ ದೇವನ್ ರಾಮಚಂದ್ರನ್ ಸೂಚಿಸಿರು. ಆದರೆ ಇದು ಸರಕಾರದ ಹೊಣೆಯಲ್ಲ ಎಂದು ಮೇಲ್ಮನವಿ ಸಲ್ಲಿಸಲಾಗಿತ್ತು.ಟ್ಟಿ
         ಆರ್ಥಿಕ ಮುಗ್ಗನಿಂದ ಜುಲೈ ಮತ್ತು ಆಗಸ್ಟ್ ತಿಂಗಳ ವೇತನ ನೀಡಲು ಸಾಧ್ಯವಾಗುತ್ತಿಲ್ಲ ಎಂದು ಕೆಎಸ್‍ಆರ್‍ಟಿಸಿ ಆಡಳಿತ ಮಂಡಳಿ ಹೈಕೋರ್ಟ್‍ಗೆ ತಿಳಿಸಿತ್ತು. ಸಹಾಯಕ್ಕಾಗಿ ಸರಕಾರದೊಂದಿಗೆ ಮಾತನಾಡಿದರೂ ಪ್ರಯೋಜನವಾಗಿಲ್ಲ. ಕೆಎಸ್‍ಆರ್‍ಟಿಸಿ ಆಡಳಿತ ಮಂಡಳಿಯು ವೇತನ ನೀಡಲು ಇನ್ನಷ್ಟು ಕಾಲಾವಕಾಶ ನೀಡುವಂತೆ ನ್ಯಾಯಾಲಯವನ್ನು ಕೋರಿತ್ತು. ಈ ಪರಿಸ್ಥಿತಿಯಲ್ಲಿ ಕಾರ್ಮಿಕರು ಹಸಿವಿನಿಂದ ಇರುವಂತಿಲ್ಲ ಎಂದು ಹೇಳಿ 103 ಕೋಟಿ ರೂ.ಗಳನ್ನು ನೀಡುವಂತೆ ಸರ್ಕಾರಕ್ಕೆ ಹೈಕೋರ್ಟ್ ಸೂಚಿಸಿದೆ. ಆದರೆ ಸರಕಾರ ಕೆಎಸ್‍ಆರ್‍ಟಿಸಿಯನ್ನು ತಳ್ಳಿಹಾಕಿದೆ.




Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries