ಪೆರ್ಲ : ನೇತಾಜಿ ಫ್ರೆಂಡ್ಸ್ ಸರ್ಕಲ್ ಪೆರ್ಲ ಹಾಗೂ ನೇತಾಜಿ ಸಾರ್ವಜನಿಕ ಗ್ರಂಥಾಲಯ ಸಮಿತಿ ವತಿಯಿಂದ 'ಓಣಂ-2022'ಕಾರ್ಯಕ್ರಮ ಸೆ. 7ರಂದು ಬೆಳಗ್ಗೆ 9ರಿಂದ ಪೆರ್ಲ ಶ್ರೀ ಸತ್ಯನಾರಾಯಣ ಪ್ರೌಢಶಾಲೆಯಲ್ಲಿ ಜರುಗಲಿರುವುದು. ಕಾರ್ಯಕ್ರಮದ ಅಂಗವಾಗಿ ಸಾರ್ವಜನಿಕ ವಿಭಾಗದ ಹೂವಿನ ರಂಗೋಲಿ ಸ್ಪರ್ಧೆ ಅಲ್ಲದೆ ಮಹಿಳೆಯರು, ಮಕ್ಕಳು, ವಿದ್ಯಾರ್ಥಿಗಳಿಗಾಗಿ ಪ್ರತ್ಯೇಕವಾಗಿ ನಾನಾ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ.
ಸಂಜೆ 4ಕ್ಕೆ ನಡೆಯುವ ಸಭಾ ಕಾರ್ಯಕ್ರಮದಲ್ಲಿ ಉದುಮ ಶಾಸಕ ಸಿ.ಎಚ್. ಕುಞಂಬು ಉದ್ಘಾಟಿಸುವರು. ಸ್ವಾಗತ ಸಮಿತಿ ಸಂಚಾಲಕ ವಿನೋದ್ ಅಮೆಕ್ಕಳ ಅಧ್ಯಕ್ಷತೆ ವಹಿಸುವರು. ಕಾಸರಗೋಡು ಜಿಪಂ ಸದಸ್ಯ ನಾರಾಯಣ ನಾಯ್ಕ್, ಮಂಜೇಶ್ವರ ಗೋವಿಂದ ಪೈ ಸ್ಮಾರಕ ಸರ್ಕಾರಿ ಕಾಲೇಜು ಪ್ರಾಂಶುಪಾಲ ಮಹಮ್ಮದಲಿ, ನಿವೃತ್ತ ಶಿಕ್ಷಕ ಲೋಕನಾಥ ಶೆಟ್ಟಿ ಕಾಟುಕುಕ್ಕೆ ಅತಿಥಿಗಳಾಗಿ ಭಾಗವಹಿಸುವರು. ಈ ಸಂದರ್ಭ ಹೈನುಗಾರಿಕೆಯಲ್ಲಿ ಉತ್ತಮ ಸಾಧನೆ ತೋರಿದ ಅಬೂಬಕ್ಕರ್ ಸಿದ್ದಿಕ್ ಖಂಡಿಗೆ ಹಾಗೂ ಪತ್ರಕರ್ತ ಪುರುಷೋತ್ತಮ ಪೆರ್ಲ ಅವರನ್ನು ಅಭಿನಂದಿಸಲಾಗುವುದು. 2021-22ನೇ ಸಾಲಿನ ಎಸ್ಸೆಸೆಲ್ಸಿಯಲ್ಲಿ ಎಲ್ಲ ವಿಷಯಗಳಲ್ಲಿ ಎಪ್ಲಸ್ ಪಡೆದ ಪೆರ್ಲ ಶ್ರೀ ಸತ್ಯನಾರಾಯಣ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಗುವುದು. 5.30ರಿಂದ ಕ್ಲಬ್ ಸದಸ್ಯರಿಂದ ಮನೋರಂಜನಾ ಕಾರ್ಯಕ್ರಮ, 7ರಿಂದ ತಳಿಪರಂಬ ಮಲರ್ವಾಡಿ ತಂಡದಿಂದ ಮಿಮಿಕ್ಸ್ ಹಾಗೂ ಮ್ಯೂಸಿಕಲ್ ನೈಟ್ ಕಾರ್ಯಕ್ರಮ ಜರುಗಲಿರುವುದು.
ನೇತಾಜಿ ಫ್ರೆಂಡ್ಸ್ ವತಿಯಿಂದ ಪೆರ್ಲದಲ್ಲಿ 'ಓಣಂ-2022'
0
ಆಗಸ್ಟ್ 27, 2022
Tags

