ಬದಿಯಡ್ಕ: ಮಾನ್ಯ ಕಾರ್ಮಾರಿನ ಶ್ರೀ ಮಹಾವಿಷ್ಣು ಯುವಕ ವೃಂದದ ಆಶ್ರಯದಲ್ಲಿ ಸಾರ್ವಜನಿಕ ಶ್ರೀ ಗಣೇಶೋತ್ಸವ ಆ. 31 ರಂದು ಕಾರ್ಮಾರು ಶ್ರೀ ಮಹಾವಿಷ್ಣು ಕ್ಷೇತ್ರದಲ್ಲಿ ಜರಗಲಿದೆ. ಕಾರ್ಯಕ್ರಮದ ಅಂಗವಾಗಿ ಬೆಳಗ್ಗೆ 10 ಕ್ಕೆ 12 ತೆಂಗಿನ ಕಾಯಿ ಗಣಪತಿ ಹವನ ಆರಂಭ, 12.30 ಕ್ಕೆ ಪೂರ್ಣಾಹುತಿ, ಮಹಾಪೂಜೆ, ಪ್ರಸಾದ ವಿತರಣೆ, ಅನ್ನ ಪ್ರಸಾದ ವಿತರಣೆ ನಡೆಯಲಿದೆ. ಕಾರ್ಯಕ್ರಮದ ಅಂಗವಾಗಿ ಬೆಳಗ್ಗೆ 10 ರಿಂದ ವಿವಿಧ ಸ್ಪರ್ಧೆಗಳನ್ನು ಸಹ ಏರ್ಪಡಿಸಲಾಗಿದೆ.
ಕಾರ್ಮಾರಲ್ಲಿ ಗಣೇಶೋತ್ಸವ 31 ರಂದು
0
ಆಗಸ್ಟ್ 29, 2022
Tags





