HEALTH TIPS

ರಾಷ್ಟ್ರಕ್ಕೆ ಖಾದಿ, ಧ್ವಜಕ್ಕೆ ಪಾಲಿಸ್ಟರ್: ಮೋದಿ ವಿರುದ್ಧ ಪ್ರತಿಪಕ್ಷಗಳ ಕಿಡಿ

 

                 ನವದೆಹಲಿ: ಖಾದಿ ಕುರಿತ ಪ್ರಧಾನಿ ನರೇಂದ್ರ ಮೋದಿ ಅವರ ದ್ವಂದ್ವ ನಿಲುವಿನ ಬಗ್ಗೆ ಪ್ರತಿಪಕ್ಷಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿವೆ.

               ಅಭಿವೃದ್ಧಿ ಹೊಂದಿದ ಆತ್ಮನಿರ್ಭರ ಭಾರತದ ಕನಸನ್ನು ನನಸಾಗಿಸಲು ಖಾದಿ ಸ್ಫೂರ್ತಿಯ ಮೂಲವಾಗಬಲ್ಲದು ಎಂದು ಮೋದಿ ಶನಿವಾರ ಹೇಳಿದ್ದರು.

ಹಿಂದಿನ ಸರ್ಕಾರಗಳ ಜತೆ ಹೋಲಿಸಿದರೆ ತಮ್ಮ ಅಧಿಕಾರಾವಧಿಯಲ್ಲಿ ಖಾದಿಗೆ ಪ್ರೋತ್ಸಾಹ ನೀಡಲಾಗಿದೆ ಎಂದು ಅವರು ಹೇಳಿದ್ದರು. ಇದು ಪ್ರತಿಪಕ್ಷಗಳನ್ನು ಕೆರಳಿಸಿದೆ.

                   ಒಂದು ಕಾಲದಲ್ಲಿ ಸ್ವಾಭಿಮಾನದ ಸಂಕೇತವಾಗಿದ್ದ ಖಾದಿ ಸ್ವಾತಂತ್ರ್ಯಾನಂತರದಲ್ಲಿ ಕಡೆಗಣಿಸಲ್ಪಟ್ಟಿತ್ತು ಎಂದು ಮೋದಿ ಹೇಳಿದ್ದರು.

                    'ದೇಶಕ್ಕೆ ಖಾದಿ, ಆದರೆ ರಾಷ್ಟ್ರಧ್ವಜಕ್ಕೆ ಚೀನಾದ ಪಾಲಿಸ್ಟರ್. ಎಂದಿನಂತೆಯೇ, ಪ್ರಧಾನಿಯವರು ಹೇಳುವುದೇ ಒಂದು, ಮಾಡುವುದು ಮತ್ತೊಂದು' ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದಾರೆ.

                      'ನೆಹರು ಅವರು ಭಾರತದ ಸ್ವಾತಂತ್ರ್ಯದ ಜೀವಾಳ ಎಂದು ಬಣ್ಣಿಸಿದ್ದ ಖಾದಿ ಮತ್ತು ಅದರಿಂದ ರಾಷ್ಟ್ರಧ್ವಜ ತಯಾರಿಸುವವರ ಜೀವನವನ್ನು ಹಾಳು ಮಾಡುತ್ತಿರುವವರ, ನಾಗ್ಪುರದ ಕಚೇರಿಯಲ್ಲಿ ರಾಷ್ಟ್ರಧ್ವಜ ಹಾರಿಸಲು 52 ವರ್ಷ ತೆಗೆದುಕೊಂಡ ಸಂಘಟನೆಯ ಪ್ರಚಾರಕರ ಬೂಟಾಟಿಕೆಗೆ ಜಿಂದಾಬಾದ್!' ಎಂದು ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್ ಟ್ವೀಟ್ ಮಾಡಿದ್ದಾರೆ.


 

Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries