HEALTH TIPS

ಉತ್ತರ ಪ್ರದೇಶದಲ್ಲಿ ಲಂಪಿ ವೈರಸ್‌: ಜಾನುವಾರು ಜಾತ್ರೆ ಸ್ಥಗಿತಗೊಳಿಸಿದ ಸರ್ಕಾರ

 

         ಲಖನೌ: ಉತ್ತರ ಪ್ರದೇಶ ರಾಜ್ಯದಲ್ಲಿ ಜಾನುವಾರುಗಳಿಗೆ ಲಂಪಿ ವೈರಸ್‌ (ಚರ್ಮ ಸಂಬಂಧಿ ರೋಗ; ಎಲ್‌ಎಸ್‌ಡಿ) ಹರಡುತ್ತಿರುವ ಹಿನ್ನೆಲೆಯಲ್ಲಿ ಜಾನುವಾರು ಜಾತ್ರೆಗಳನ್ನು ಸ್ಥಗಿತಗೊಳಿಸಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಆದೇಶಿಸಿದ್ದಾರೆ.

ದೇಶದ ಉತ್ತರ ಭಾಗದ ಕೆಲವು ರಾಜ್ಯಗಳಲ್ಲಿ ಲಂಪಿ ವೈರಸ್‌ ಹರಡುತ್ತಿದ್ದು ಹಲವಾರು ಜಾನುವಾರುಗಳು ಸಾವನ್ನಪ್ಪಿರುವುದರಿಂದ ಸರ್ಕಾರ ಈ ಆದೇಶ ಹೊರಡಿಸಿದೆ.

            ಲಂಪಿ ವೈರಸ್ ತಡೆಯಲು ಉತ್ತರ ಪ್ರದೇಶ ಸರ್ಕಾರ ಮಿಷನ್ ಮೋಡ್‌ನಲ್ಲಿ ಕೆಲಸ ಮಾಡಬೇಕಾಗುತ್ತದೆ ಎಂದು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಹೇಳಿದ್ದಾರೆ. ಇದಕ್ಕಾಗಿ ಲಸಿಕೆ ಅಭಿಯಾನ ನಡೆಸಲಾಗುವುದು ಎಂದು ಅವರು ತಿಳಿಸಿದ್ದಾರೆ

                ಜನರು ಕೂಡ ಗೋಶಾಲೆಗಳಿಗೆ ತೆರಳದಂತೆ ಹಾಗೂ ಜಾನುವಾರು ಮೃತಪಟ್ಟರೆ ಅವುಗಳನ್ನು ಸುಡಬೇಕು ಎಂದು ಸರ್ಕಾರ ಸೂಚನೆ ನೀಡಿದೆ. ಈಗಾಗಲೇ ರಾಜ್ಯದ 15 ಜಿಲ್ಲೆಗಳಲ್ಲಿ ಲಂಪಿ ವೈರಸ್‌ ಪ್ರಕರಣಗಳು ವರದಿಯಾಗಿವೆ. ರಾಜ್ಯದ ಪಶ್ಚಿಮ ಭಾಗದಲ್ಲಿ ಹೆಚ್ಚಿನ ಪ್ರಕರಣಗಳು ಪತ್ತೆಯಾಗಿವೆ ಎಂದು ಸರ್ಕಾರ ಹೇಳಿದೆ.

              ರಾಜ್ಯ ಸರ್ಕಾರ ಕೇಂದ್ರದೊಂದಿಗೆ ಸಮನ್ವಯ ಸಾಧಿಸಿದ್ದು ಚಿಕಿತ್ಸೆಗೆ ಅಗತ್ಯವಿರುವ ಔಷಧಗಳನ್ನು ತರಿಸಿಕೊಂಡಿದೆ. ಹಾಗೇ ನಿಯಂತ್ರಣ ಕೊಠಡಿಯನ್ನು ಕೂಡ ತೆರೆಯಲಾಗಿದೆ ಎಂದು ಸರ್ಕಾರ ಹೇಳಿದೆ.


Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries