HEALTH TIPS

ರಾಹುಲ್​ ಕಚೇರಿಯ ಗಾಂಧಿ ಫೋಟೋ ಧ್ವಂಸ; ವಿಡಿಯೋದಿಂದ ಬಯಲಾಯ್ತು ಭಯಾನಕ ಸತ್ಯ- ಕಾಂಗ್ರೆಸ್ಸಿಗರೇ ಅರೆಸ್ಟ್​!

 

                ವಯನಾಡ್​ : ಅತ್ಯಂತ ಆತಂಕಕಾರಿ ಘಟನೆಯೊಂದರಲ್ಲಿ ಖುದ್ದು ಕಾಂಗ್ರೆಸ್ಸಿಗರೇ ಗಾಂಧಿಯವರ ಫೋಟೋ ಧ್ವಂಸಗೊಳಿಸಿರುವ ಘಟನೆ ನಡೆದಿದೆ. ಇದು ನಡೆದಿರುವುದು ಖುದ್ದು ಸಂಸದ ರಾಹುಲ್​ಗಾಂಧಿ ಪ್ರತಿನಿಧಿಸುತ್ತಿರುವ ಕೇರಳದ ವಯನಾಡಿನಲ್ಲಿ. ಘಟನೆಗೆ ಸಂಬಂಧಿಸಿದಂತೆ ರಾಹುಲ್​ಗಾಂಧಿ ಆಪ್ತ ಸಹಾಯಕ ಸೇರಿದಂತೆ ನಾಲ್ವರನ್ನು ಪೊಲೀಸರು ಅರೆಸ್ಟ್​ ಮಾಡಿದ್ದಾರೆ.

                  ಆಗಿದ್ದೇನೆಂದರೆ, ರಾಹುಲ್ ಗಾಂಧಿ ಅವರ ಕಚೇರಿಯ ಮೇಲೆ ಇತ್ತೀಚೆಗೆ ಎಸ್‌ಎಫ್‌ಐ ಕಾರ್ಯಕರ್ತರು ದಾಳಿ ನಡೆಸಿದ್ದರು. ಈ ಕ್ಷೇತ್ರದಿಂದ ಗೆಲುವು ಸಾಧಿಸಿ ಸಂಸದರಾದ ಮೇಲೆ ಕ್ಷೇತ್ರದತ್ತ ಗಮನವನ್ನೇ ಹರಿಸುತ್ತಿಲ್ಲ, ಯಾವುದೇ ಅಭಿವೃದ್ಧಿ ಕಾರ್ಯಗಳನ್ನು ನಡೆಸುತ್ತಿಲ್ಲ ಎನ್ನುವ ಕಾರಣಕ್ಕೆ ಆಕ್ರೋಶಗೊಂಡಿದ್ದ ಎಸ್‌ಎಫ್‌ಐ ಕಾರ್ಯಕರ್ತರು ಗಲಾಟೆ ನಡೆಸಿದ್ದರು. ಅದಕ್ಕೆ ಪ್ರತಿಯಾಗಿ ಕಾಂಗ್ರೆಸ್​ ಕಾರ್ಯಕರ್ತರು ಗಲಾಟೆ ಶುರು ಮಾಡಿದ್ದರು.

                 ಇದಾದ ನಂತರ ನೋಡಿದಾಗ ಅಲ್ಲಿರುವ ಪೀಠೋಪಕರಣಗಳು ಧ್ವಂಸಗೊಂಡಿದ್ದವು, ಮಾತ್ರವಲ್ಲದೇ ಗಾಂಧಿಯವರ ಫೋಟೋ ಕೂಡ ಧ್ವಂಸಗೊಂಡಿತ್ತು. ಇದನ್ನು ಮಾಡಿದ್ದು ತಾವೇ ಎಂದು ತಿಳಿದಿದ್ದರೂ ರಾಹುಲ್​ಗಾಂಧಿ ಆಪ್ತ ಸಹಾಯಕ ರತೀಶ್ ಕುಮಾರ್ ಸೇರಿದಂತೆ ಕಾಂಗ್ರೆಸ್​ ಕಾರ್ಯಕರ್ತರು, ಎಸ್​ಎಫ್​ಐ ಕಾರ್ಯಕರ್ತರೇ ಇದನ್ನು ಮಾಡಿರುವುದಾಗಿ ಆರೋಪಿಸಿದರು. ಇದಕ್ಕೆ ಸಂಬಂಧಿಸಿದಂತೆ ಎರಡು ಗುಂಪುಗಳ ನಡುವೆ ಗಲಾಟೆ ಶುರುವಾಗಿತ್ತು. ಗಾಂಧಿಯವರ ಫೋಟೋ ತಾವು ಧ್ವಂಸಗೊಳಿಸಲಿಲ್ಲ, ಬದಲಿಗೆ ಕಾಂಗ್ರೆಸ್ಸಿಗರೇ ಮಾಡಿರುವುದಾಗಿ ಎಸ್​ಎಫ್​ಐ ಕಾರ್ಯಕರ್ತರು ಹೇಳಿದ್ದರು.

                      ನಂತರ ಈ ಪ್ರಕರಣ ಪೊಲೀಸ್​ ಠಾಣೆ ಮೆಟ್ಟಿಲೇರಿತು. ಪೊಲೀಸರು ಅಲ್ಲಿದ್ದ ಸಿಸಿಟಿವಿ ಪರೀಕ್ಷೆ ಮಾಡಿದಾಗ ಸತ್ಯಾಂಶ ಬಯಲುಗೊಂಡಿದೆ. ಗಾಂಧಿ ಫೋಟೋ ಅನ್ನು ಖುದ್ದು ರಾಹುಲ್​ ಗಾಂಧಿ ಅವರ ಆಪ್ತ ಸಹಾಯಕ ರತೀಶ್ ಕುಮಾರ್ ಸೇರಿದಂತೆ ಕಚೇರಿ ಸಿಬ್ಬಂದಿ ರಾಹುಲ್​​ ಎಸ್. ರವಿ, ಕಾಂಗ್ರೆಸ್ ಕಾರ್ಯಕರ್ತರಾದ ನೌಶಾದ್ ಮತ್ತು ಮುಜೀಬ್​ ಧ್ವಂಸಗೊಳಿಸಿರುವುದು ತಿಳಿದುಬಂದಿದೆ.

                 ಘಟನೆಗೆ ಸಂಬಂಧಿಸಿದಂತೆ ಈ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ. ಘಟನೆಗೆ ಖುದ್ದು ಕಾಂಗ್ರೆಸ್ ಕಾರ್ಯಕರ್ತ ರತೀಶ್ ಖುದ್ದಾಗಿ ಸಾಕ್ಷಿ ನುಡಿದಿದ್ದು, ಸತ್ಯಕ್ಕೆ ಮತ್ತಷ್ಟು ಪುಷ್ಟಿ ಸಿಕ್ಕಿದೆ.

                    ಎಸ್​​ಎಫ್​ಐ ಕಾರ್ಯಕರ್ತರು ಕಚೇರಿ ಮೇಲೆ ದಾಳಿ ನಡೆಸಿದ ಸಂದರ್ಭದಲ್ಲಿ ಗಾಂಧಿಯವರ ಭಾವಚಿತ್ರಕ್ಕೆ ಯಾವುದೇ ರೀತಿಯ ಹಾನಿಯಾಗಿರಲಿಲ್ಲ ಎನ್ನುವುದು ವಿಡಿಯೋದಿಂದ ಸ್ಪಷ್ಟವಾಗಿ ಗೋಚರಿಸುತ್ತಿದೆ. ಆದರೆ ಕಾಂಗ್ರೆಸ್‌ನ ಸಾಮಾಜಿಕ ಮಾಧ್ಯಮ ಹ್ಯಾಂಡಲ್​​ ಈ ವಿಚಾರವನ್ನಿಟ್ಟುಕೊಂಡು ವ್ಯಾಪಕವಾಗಿ ಪ್ರಚಾರ ಮಾಡಿ ಗಾಂಧಿ ಅವರ ಭಾವಚಿತ್ರಕ್ಕೆ ಎಸ್​​ಎಫ್​ಐ ಹಾನಿ ಉಂಟು ಮಾಡಿದೆ ಎಂದಿತ್ತು. ಆದರೆ ಇದೀಗ ಸತ್ಯ ಸಾಕ್ಷಿ ಸಹಿತ ಬಯಲುಗೊಂಡಿದೆ

Kerala | 4 Congress workers incl MP Rahul Gandhi's staff arrested for vandalizing a picture of Mahatma Gandhi in his Wayanand office: Kalpetta police Congress had earlier alleged that it was SFI workers who vandalized the picture in Congress MP Rahul Gandhi's office in Wayanad
ANI
@ANI
#WATCH | Kerala: Congress MP Rahul Gandhi's office in Wayanad vandalised. Indian Youth Congress, in a tweet, alleges that "the goons held the flags of SFI" as they climbed the wall of Rahul Gandhi's Wayanad office and vandalised it.
Embedded video

Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries