HEALTH TIPS

ಯಕ್ಷಗಾನಕ್ಕೆ ದೊಡ್ಡ ಕೊಡುಗೆ ಕಾಸರಗೋಡಿನ ಕಲಾವಿದರಿಂದ: ಭುಜಬಲಿ ಧರ್ಮಸ್ಥಳ


          ಮಧೂರು:  ತೆಂಕು ತಿಟ್ಟು ಯಕ್ಷಗಾನಕ್ಕೆ ಬೃಹತ್ ಕೊಡುಗೆ ಗಡಿನಾಡು ಕಾಸರಗೋಡಿನಿಂದಿರುವುದು ಉಲ್ಲೇಖನೀಯ.  ಪಾರ್ತಿಸುಬ್ಬನಿಂದ ಮೊದಲ್ಗೊಂಡು ಹಲವಾರು ಮಹನೀಯರು ಮಹಾನ್ ಕೊಡುಗೆ ನೀಡಿರುವರು. ಯಾವ ಮೇಳವಾದರು ಹೆಚ್ಚಿನ ಕಲಾವಿದರು ಕಾಸರಗೋಡಿನವರೇ ಇರುವುದು ದಾಖಲೀಯವಾದುದು. ಅಂತಹ ಪುಣ್ಯ ಭೂಮಿಯಲ್ಲಿ ಸಿರಿಬಾಗಿಲು ಪ್ರತಿμÁ್ಠನ ಸಾಂಸ್ಕøತಿಕ ಭವನ ರಚಿಸಿ ಕಲೆ- ಸಾಹಿತ್ಯಗಳ ಬೆಳವಣಿಗೆ ಪ್ರಯತ್ನಿಸುವುದು ಉತ್ತಮ ಕಾರ್ಯ. ಶ್ರೀ ಧರ್ಮಸ್ಥಳ ಮೇಳದಲ್ಲಿ ಹಿಂದಿನಿಂದಲೂ ಹೆಚ್ಚಿನ ಕಲಾವಿದರು ಗಡಿನಾಡಿನವರೇ ಆಗಿದ್ದಾರೆ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳದ ನಿವೃತ್ತ ಪಾರುಪತ್ಯಗಾರ, ಕಲಾಭಿಮಾನಿ,ಪೋಷಕ ಭುಜಬಲಿ ಧರ್ಮಸ್ಥಳ ಹೇಳಿದರು.
         ಸಿರಿಬಾಗಿಲು ವೆಂಕಪ್ಪಯ್ಯ ಸಾಂಸ್ಕೃತಿಕ ಪ್ರತಿμÁ್ಠನದ, ಸಿರಿಬಾಗಿಲು ವೆಂಕಪ್ಪಯ್ಯ ಸಾಂಸ್ಕೃತಿಕ ಭವನದಲ್ಲಿ ಸಾರ್ವಜನಿಕ ಲೋಕಾರ್ಪಣೆಯ ವರೇಗೆ ನಡೆಯುವ ಕಲಾ ಸಾಂಸ್ಕೃತಿಕ ಸಾಹಿತ್ಯ ವೈಭವ ಎರಡನೇ ಕಾರ್ಯಕ್ರಮವನ್ನು ಶನಿವಾರ  ಉಧ್ಘಾಟಿಸಿ ಮಾತನಾಡಿದರು.



           ನೀರ್ಚಾಲು ಪರಮೇಶ್ವರ ಆಚಾರ್ಯ ಕಲಾ ಪ್ರತಿμÁ್ಠನದಿಂದ  ದಿ.ಪರಮೇಶ್ವರ ಆಚಾರ್ಯ ಸಂಸ್ಮರಣೆ ನಡೆಯಿತು.  ಹಿರಿಯ ಕಲಾವಿದರಾಗಿ ಯಕ್ಷಗಾನದ ಸವಾರ್ಂಗದ ಪರಿಣತ ಪರಮೇಶ್ವರ ಆಚಾರ್ಯರು ದೊಡ್ಡ ಕೊಡುಗೆ ನೀಡಿದ ಮಹನೀಯರು. ಎಂದು ಶ್ರೀ ಲಕ್ಮಣ ಪ್ರಭು ಕರಿಂಬಿಲ  ನುಡಿದರು. ಆ ಬಳಿಕ ಹಟ್ಟಿಯಂಗಡಿ ರಾಮ ಭಟ್ಟ ವಿರಚಿತ ಅತಿಕಾಯ ಮೋಕ್ಷ  ತಾಳಮದ್ದಳೆ ನಡೆಯಿತು.  ಅತಿಕಾಯನಾಗಿ ರಾಧಾಕೃಷ್ಣ ಕಲ್ಚಾರ್ ವಿಟ್ಲ, ರಾವಣನಾಗಿ ಪಕಳಕುಂಜ ಶ್ಯಾಮ್ ಭಟ್,  ರಾವಣ ದೂತನಾಗಿ ಡಾ. ಬೇ. ಸಿ.ಗೋಪಾಲಕೃಷ್ಣ ಭಟ್ಟ , ಲಕ್ಮಣನಾಗಿ  ಬಾಲಕೃಷ್ಣ ಆಚಾರ್ಯ ನೀರ್ಚಾಲ್, ವಿಭೀಷಣ ನಾಗಿ ವಿಷ್ಣು ಪ್ರಕಾಶ್ ಪೆರ್ವ, ರಾಮ ನಾಗಿ ಲಕ್ಮಣ ಪ್ರಭು ಕರಿಂಬಿಲ ಭಾಗವಹಿಸಿದರು.
      ಸುರೇಶ ಆಚಾರ್ಯ ನೀರ್ಚಾಲ್, ವೆಂಕಟರಾಜ ಕುಂಠಿಕಾನ ಮಠ ಭಾಗವತರಾಗಿ, ಗೋಪಾಲಕೃಷ್ಣ ನಾವಡ ಮಧೂರು, ಮುರಳಿ ಮಾಧವ ಮಧೂರು ಹಿಮ್ಮೇಳದಲ್ಲಿ ಸಹಕರಿಸಿದರು.  ಪ್ರತಿμÁ್ಠನದ ಅಧ್ಯಕ್ಷ ರಾಮಕೃಷ್ಣ ಮಯ್ಯ ಸಿರಿಬಾಗಿಲು ಸ್ವಾಗತಿಸಿ, ಜಗದೀಶ ಕೂಡ್ಲು ನಿರೂಪಿಸಿದರು.



ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries