ಬದಿಯಡ್ಕ: ಪೆರಡಾಲ ಶ್ರೀ ಉದನೇಶ್ವರ ಸನ್ನಿಧಿಯಲ್ಲಿ ಸಾಮೂಹಿಕ ಶ್ರೀ ವರಮಹಾಲಕ್ಷ್ಮಿ ಪೂಜೆ ಶುಕ್ರವಾರ ನಡೆಯಿತು. ಶ್ರೀ ಉದನೇಶ್ವರ ಸೇವಾ ಸಮಿತಿಯ ವತಿಯಿಂದ ಕಾರ್ಯಕ್ರಮ ಆಯೋಜಿಸಲಾಗಿತ್ತು. ದೇವಸ್ಥಾನದ ಆಡಳಿತ ಮೊಕ್ತೇಸರ ವಕೀಲ ವೆಂಕಟ್ರಮಣ ಭಟ್, ಸದಸ್ಯರಾದ ಪಿ. ಜಿ ಜಗನ್ನಾಥ ರೈ, ಕೃಷ್ಣ, ಜಗದೀಶ ಪೆರಡಾಲ, ಮಾಜಿ ಟ್ರಸ್ಟೀ ಪಿ. ಜಿ ಚಂದ್ರಹಾಸ ರೈ, ಸೇವಾ ಸಮಿತಿ ಅಧ್ಯಕ್ಷ ಜಯದೇವ ಖಂಡಿಗೆ, ಸೇವಾ ಸಮಿತಿ ಕಾರ್ಯದರ್ಶಿ ನಿರಂಜನ ರೈ ಪೆರಡಾಲ, ಶಿವಪ್ರಸಾದ್ ರೈ, ಕೋಶಾಧಿಕಾರಿ ವೆಂಕಟಗಿರೀಶ್ ಪಟ್ಟಾಜೆ, ಸೇವಾ ಸಮಿತಿ ಪದಾಧಿಕಾರಿಗಳು ಸದಸ್ಯರು ಅರ್ಚಕ ವೃಂದ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.
ಪೆರಡಾಲ ಉದನೇಶ್ವರ ಸನ್ನಿಧಿಯಲ್ಲಿ ಶ್ರೀ ವರಮಹಾಲಕ್ಷ್ಮೀ ವ್ರತಾಚರಣೆ
0
August 06, 2022