HEALTH TIPS

ಹಿಜಾಬ್‌ ಪ್ರಕರಣ: ಸೋಮವಾರ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿಗಳ ವಿಚಾರಣೆ

 

               ನವದೆಹಲಿ: ಹಿಜಾಬ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್‌ ನೀಡಿರುವ ತೀರ್ಪು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಗಳನ್ನು ಸುಪ್ರೀಂ ಕೋರ್ಟ್‌ ಸೋಮವಾರ ವಿಚಾರಣೆಗೆ ಒಳಪಡಿಸಲಿದೆ.

           ರಾಜ್ಯದ ಪದವಿಪೂರ್ವ ಕಾಲೇಜುಗಳಲ್ಲಿ ಹಿಜಾಬ್‌ಗೆ ನಿಷೇಧ ಹೇರುವ ಶಿಕ್ಷಣ ಸಂಸ್ಥೆಗಳ ಕ್ರಮವನ್ನು ಹೈಕೋರ್ಟ್‌, ಮಾರ್ಚ್‌ 15ರ ತೀರ್ಪಿನಲ್ಲಿ ಎತ್ತಿಹಿಡಿದಿತ್ತು.

ಇದನ್ನು ಪ್ರಶ್ನಿಸಿ 24 ಪ್ರತ್ಯೇಕ ಅರ್ಜಿಗಳು ದಾಖಲಾಗಿದ್ದವು. ನ್ಯಾಯಮೂರ್ತಿಗಳಾದ ಹೇಮಂತ್‌ ಗುಪ್ತಾ ಹಾಗೂ ಸುಧಾಂಶು ಧುಲಿಯಾ ಅವರನ್ನೊಳಗೊಂಡ ದ್ವಿಸದಸ್ಯ ಪೀಠ ಇವುಗಳ ವಿಚಾರಣೆ ನಡೆಸಲಿದೆ.

                  ಆಲ್‌ ಇಂಡಿಯಾ ಡೆಮಾಕ್ರಟಿಕ್‌ ವಿಮೆನ್ಸ್‌ ಅಸೋಸಿಯೇಷನ್‌, ವಿಮೆನ್ಸ್‌ ವಾಯ್ಸ್‌, ಫೋರಂ ಫಾರ್‌ ಸೆಕ್ಯುಲರ್‌ ಥಿಯೊ-ಡೆಮಾಕ್ರಸಿ, ಮುಸ್ಲಿಂ ಗರ್ಲ್ಸ್‌ ಆಯಂಡ್‌ ವಿಮೆನ್ಸ್‌ ಮೂವ್‌ಮೆಂಟ್‌, ಮುಸ್ಲಿಂ ವಿಮೆನ್ಸ್‌ ಸ್ಟಡಿ ಸರ್ಕಲ್‌ ಸೇರಿದಂತೆ ಹಲವು ಸ್ವಯಂ ಸೇವಾ ಸಂಸ್ಥೆಗಳು ಹಾಗೂ ಇತರರು ದಾಖಲಿಸಿರುವ ಅರ್ಜಿಗಳ ವಿಚಾರಣೆಯು ಕೋರ್ಟ್‌ ಸಂಖ್ಯೆ 7ರಲ್ಲಿ ನಿಗದಿಯಾಗಿದೆ.

            ಹಿಜಾಬ್‌ ಪ್ರಕರಣಕ್ಕೆ ಸಂಬಂಧಿಸಿ ಮಾರ್ಚ್‌ನಲ್ಲಿ ಸಲ್ಲಿಕೆಯಾಗಿದ್ದ ಅರ್ಜಿಗಳ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್‌ ನಿರಾಕರಿಸಿತ್ತು.


Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries