HEALTH TIPS

ಕಾಸರಗೋಡು ಜಿಲ್ಲೆಯಲ್ಲಿ ಭೂಕುಸಿತ; ಅಲರ್ಟ್ ಘೋಷಣೆ


                 ಕಾಸರಗೋಡು: ಜಿಲ್ಲೆಯ ಮರುತೊಮ್ ಚುಳ್ಳಿ ಅರಣ್ಯದಲ್ಲಿ ಭೂಕುಸಿತವಾಗಿದೆ. ಮಲೆನಾಡ ಹೆದ್ದಾರಿಗೆ ಕಲ್ಲು, ಮಣ್ಣುಗಳು ಕುಸಿದು ಬಿದ್ದು ಸಂಚಾರ ಸಂಪೂರ್ಣ ಮೊಟಕುಗೊಂಡಿದೆ. ಈ ಪ್ರದೇಶದಲ್ಲಿ ಅಲರ್ಟ್ ಘೋಷಿಸಲಾಗಿದೆ.
         ಕಳೆದ  ಕೆಲ ದಿನಗಳಿಂದ ಸುರಿದ ಮಳೆಗೆ ರಾಜ್ಯದ ವಿವಿಧೆಡೆ ಭೂಕುಸಿತ ಸಂಭವಿಸಿದೆ. ವಿವಿಧೆಡೆ ಜನ ಪರದಾಡುತ್ತಿದ್ದು, ಪಾಸ್ ಮೂಲಕ ಸಂಚಾರ ಅಸ್ತವ್ಯಸ್ತಗೊಂಡಿದೆ. ಕಾಣಿಚಾರ್ ಪಂಚಾಯಿತಿಯಲ್ಲಿ ಭೂಕುಸಿತ ಸಂಭವಿಸಿದ್ದು, ನಾಲ್ಕು ಕುಟುಂಬಗಳನ್ನು ಸ್ಥಳಾಂತರಿಸಲಾಗಿದೆ.
           ಸಂಪುಟ ಸಭೆಯಲ್ಲಿ ಇಂದು ರಾಜ್ಯದಲ್ಲಿ ಮಳೆ ಸಂಬಂಧಿತ ಮತ್ತು ವಿಪತ್ತು ಪರಿಹಾರ ಚಟುವಟಿಕೆಗಳ ಅವಲೋಕನ  ನಡೆಯಿತು.  ಸಭೆ ಆನ್‍ಲೈನ್ ನಲ್ಲಿ ನಡೆಯಿತು. ವಿಪತ್ತು ಪರಿಹಾರ ಕಾರ್ಯಗಳನ್ನು ಸಮನ್ವಯಗೊಳಿಸಲು ಸಚಿವರು ವಿವಿಧ ಜಿಲ್ಲೆಗಳಲ್ಲಿ ವಾಸ್ತವ್ಯ ಹೂಡಿರುವುದರಿಂದ ಆನ್‍ಲೈನ್‍ನಲ್ಲಿ ಸಭೆ ನಡೆಸಲಾಯಿತು.  ಸಭೆಯಲ್ಲಿ ಪ್ರಸ್ತುತ ಅಳವಡಿಸಿಕೊಂಡಿರುವ ಮುಂಜಾಗ್ರತಾ ಕ್ರಮಗಳು, ಅಪಾಯಗಳು ಇತ್ಯಾದಿಗಳ ಬಗ್ಗೆ ಸಚಿವರು ಮಾಹಿತಿ ನೀಡಿದರು.
           ರಾಜ್ಯದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಸದ್ಯಕ್ಕೆ ಮರೆಯಾಗಿದೆ ಎಂದು ಕೇಂದ್ರ ಹವಾಮಾನ ಕೇಂದ್ರ ತಿಳಿಸಿದೆ. ಸದ್ಯ ಮೂರು ಜಿಲ್ಲೆಗಳಲ್ಲಿ ಮಾತ್ರ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಕೊಟ್ಟಾಯಂ, ಇಡುಕ್ಕಿ ಮತ್ತು ಎರ್ನಾಕುಳಂ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ.
        ಪತ್ತನಂತಿಟ್ಟ, ಅಲಪ್ಪುಳ, ತ್ರಿಶೂರ್, ಪಾಲಕ್ಕಾಡ್, ಮಲಪ್ಪುರಂ, ಕೋಝಿಕ್ಕೋಡ್, ವಯನಾಡ್ ಮತ್ತು ಕಣ್ಣೂರು ಎಂಬ ಎಂಟು ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ತಿರುವನಂತಪುರಂ, ಕೊಲ್ಲಂ ಮತ್ತು ಕಾಸರಗೋಡು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಜಾರಿಯಲ್ಲಿದೆ. ಕಣ್ಣೂರು, ವಯನಾಡು, ಇಡುಕ್ಕಿ ಮತ್ತು ಕೊಟ್ಟಾಯಂ ಜಿಲ್ಲೆಗಳಲ್ಲಿ ನಾಳೆ ರೆಡ್ ಅಲರ್ಟ್. ಪತ್ತನಂತಿಟ್ಟ, ಅಲಪ್ಪುಳ, ಎರ್ನಾಕುಲಂ, ತ್ರಿಶೂರ್, ಪಾಲಕ್ಕಾಡ್, ಮಲಪ್ಪುರಂ ಮತ್ತು ಕೋಯಿಕ್ಕೋಡ್ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಹಾಗೂ ಕಾಸರಗೋಡು, ತಿರುವನಂತಪುರಂ ಮತ್ತು ಕೊಲ್ಲಂ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಜಾರಿಯಲ್ಲಿದೆ.



 

Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries