ಉಪ್ಪಳ : ಮುಳಿಂಜ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಅಜಾದಿ ಕಾ ಅಮೃತ ಮಹೋತ್ಸವ 75 ನೇ ಸ್ವಾತಂತ್ರ್ಯ ದಿನಾಚರಣೆ ಅದ್ದೂರಿಯಾಗಿ ನಡೆಯಿತು. ಶಾಲಾ ಮುಖ್ಯ ಶಿಕ್ಷಕಿ ಚಿತ್ರಾವತಿ ರಾವ್ ಚಿಗುರುಪಾದೆ ಧ್ವಜಾರೋಹಣಗೈದರು. ಮಂಗಲ್ಪಾಡಿ ಗ್ರಾಮ ಪಂಚಾಯತಿ ವಿದ್ಯಾಭ್ಯಾಸ ಸ್ಥಾಯಿ ಸಮಿತಿ ಅಧ್ಯಕ್ಷೆ ಇರ್ಪಾನ ಇಕ್ಬಾಲ್ ಉದ್ಘಾಟಿಸಿದರು. ಸಭಾ ಕಾರ್ಯಕ್ರಮದಲ್ಲಿ ಶಾಲಾಭಿವೃದ್ದಿ ಸಮಿತಿ ಅಧ್ಯಕ್ಷ ಇಬ್ರಾಹಿಂ ಹನೀಪಿ ಅಧ್ಯಕ್ಷತೆ ವಹಿಸಿ ಶುಭಾಶಂಸನೆಗೈದರು. ಮಂಗಲ್ಪಾಡಿ ಗ್ರಾಮ ಪಂಚಾಯತಿ ಮಾಜಿ ಸದಸ್ಯರಾದ ಇಕ್ಬಾಲ್ ಮತ್ತು ಸುಜಾತ ಶೆಟ್ಟಿ ಮಂಜೇಶ್ವರ, ಬ್ಲಾಕ್ ಕಾರ್ಯನಿರೂಪಣಾಧಿಕಾರಿ ವಿಜಯಕುಮಾರ ಪಾವಳ, ಶಿಕ್ಷಕಿ ಅಪ್ಸ, ಶಿಕ್ಷಕ ಫಿರೋμï ಶುಭಾಶಂಸನೆಗೈದರು. ಬಳಿಕ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ವಿದ್ಯಾರ್ಥಿಗಳಿಗೆ ನಡೆಸಿದ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನ ನೀಡಲಾಯಿತು.
ಶಾಲಾ ಶಿಕ್ಷಕ ರಿಯಾಸ್ ಸ್ವಾಗತಿಸಿ, ವಂದಿಸಿದರು. ಹಿರಿಯ ಶಿಕ್ಷಕಿ ಅನಿತಕುಮಾರಿ ನಿರೂಪಿಸಿದರು. ಶಾಲಾ ವಿದ್ಯಾರ್ಥಿಗಳಿಂದ ಮೆರವಣಿಗೆ ನಡೆಯಿತು. ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕ್ರತಿಕ ಕಾರ್ಯಕ್ರಮ ಜರಗಿತು.